Home / ಲೇಖನ / ವಿಜ್ಞಾನ / ಉಲ್ಕಾ ವೃಷ್ಟಿ!!

ಉಲ್ಕಾ ವೃಷ್ಟಿ!!

ನಿರ್ಧಿಷ್ಟ ಪಥದಲ್ಲಿ ತಿರುಗುವ ಗ್ರಹಗಳ ನಡುವಿನ ಹಾದಿಯಲ್ಲಿ ಅಡ್ಡ ಬರುವ ಸಣ್ಣ ಬಂಡೆಗಳಂತಹ ಮಿಟಿಯೋರಾಯ್ಡ್ಸ್ ಭೂಮಿಯ ವಾಯುಮಂಡಲ ಪ್ರವೇಶಿಸಿದಾಗ ಗಾಳಿಯ ಜತೆ ಸಂಘರ್ಷಕ್ಕೊಳಗಾಗುತ್ತವೆ. ತಿಕ್ಕಾಟದಿಂದ ಇವು ಉರಿಯತೊಡಗುತ್ತವೆ. ಭೂಮಿಗೆ ಗುರುತ್ವಾಕರ್ಷಣೆ ಇರುವುದರಿಂದ ಭೂಮಿ ಎಡೆಗೆ ಧಾವಿಸಿ ಮಿಂಚುವ ನಕ್ಷತ್ರಗಳಂತೆ ಕಂಡು ಕರಗಿ ಹೋಗುತ್ತವೆ. ಉರಿದು ಬೀಳುವ ಈ ಸ್ಥಿತಿಯಲ್ಲಿ ಇವಕ್ಕೆ ‘ಮೀಟಿಯೋರ್ಸ್’ ಉಲ್ಕೆಗಳೆಂದು ಕರೆಯಲಾಗುತ್ತದೆ.

ಇಂಥಹ ಅಸಂಖ್ಯಾತ ಉಲ್ಕೆಗಳ ಪಾತ ದಿನವೂ ಆಕಾಶದಲ್ಲಿ ನಡೆಯುತ್ತಲೇ ಇರುತ್ತದೆ. ಬೀಳುವ ನಕ್ಷತ್ರ ಉಲ್ಕೆಯು ಸಾವುನೋವಿನಂತಹ ವಿಪ್ಲವ ತರುತ್ತದೆನ್ನುವುದು ಜನಸಾಮಾನ್ಯರ ನಂಬಿಕೆಯಾಗಿದೆ. ಪ್ರತಿ ಮೂವತ್ಮೂರು ವರ್ಷಗಳ ಅಂತರದಲ್ಲಿ ಉಲ್ಕಾಪಾತ ಗಣನೀಯವಾಗಿ ಹೆಚ್ಚುತ್ತದೆಂದು ಖಗೋಳ ವಿಜ್ಞಾನಿಗಳ ಅಭಿಮತ. ಗಂಟೆಗೆ ೫೦ ರಿಂದ ೧೦೦ ರ ತನಕ ನವೆಂಬರ್ ತಿಂಗಳ ೧೮ ರ ಬೆಳಗಿನ ಜಾವ ೨-೧ಂ ಗಂಟೆಗೆ ಶಿಖರ ತಲುಪುವ ಈ ನಕ್ಷತ್ರ ಮಳೆ ಬರಿಕಣ್ಣಿಗೆ ವಿಜ್ಞಾನಿಗಳಿಗೆ ಕಂಡಿತು. ಲಿಯೋನಿಡ್ ಮಿಟಿಯೋರಾಯ್ಡ್ಸ್‌ ಎಂದು ವಿಜ್ಞಾನಿಗಳು ಹೆಸರಿಸಿರುವ ಈ ಆಕಾಶಕಾಯಗಳು ‘ಟೆಂಪಲ್‌ಟಟ್ಸ್’ ಎನ್ನುವ ಧೂಮಕೇತು ಉಳಿಸಿ ಹೋದ ಧೂಳು ಕಸದಿಂದ ನಿರ್ಮಾಣವಾದವು. ಭೂಮಿಯ ಮೇಲ್ಮೈ ತಲುಪುವ ವೇಳೆಗಾಗಲೇ ಉಷ್ಣತೆ ಕಳೆದುಕೊಂಡು ಮತ್ತೆ ಬಂಡೆಗಳಂತಾದಾಗ ಉಲ್ಕೆಗಳನ್ನು ಮಿಟಿಯೋರೈಟ್ಸ್ ಎಂದು ಕರೆಯುತ್ತಾರೆ. ಲೋಹ ರಾಸಾಯನಿಕಗಳ ಕಲ್ಲು ಧೂಳುನಿಂದ ಕೂಡಿದ ಉಲ್ಕೆಗಳು ಜೀವ ಸೃಷ್ಟಿಗೆ ಬೇಕಾದ ಕಚ್ಚಾ ಪದಾರ್ಥಗಳನ್ನು ಒದಗಿಸಬಲ್ಲವು ಎನ್ನುತ್ತಾರೆ. ಖಗೋಳ ವಿಜ್ಞಾನಿಗಳು. ೩೬ ವರ್ಷಗಳಿಗೊಮ್ಮೆ ಪಾತಗೊಳ್ಳುವ ಈ ಉಲ್ಕೆಗಳ ದೃಷ್ಟಿಯಿಂದ ಇದುವರೆಗೆ ಅಪಾಯಗಳಾದ ವರದಿಗಳಿಲ್ಲ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...