Home / ಲೇಖನ / ವಿಜ್ಞಾನ / ಉಲ್ಕಾ ವೃಷ್ಟಿ!!

ಉಲ್ಕಾ ವೃಷ್ಟಿ!!

ನಿರ್ಧಿಷ್ಟ ಪಥದಲ್ಲಿ ತಿರುಗುವ ಗ್ರಹಗಳ ನಡುವಿನ ಹಾದಿಯಲ್ಲಿ ಅಡ್ಡ ಬರುವ ಸಣ್ಣ ಬಂಡೆಗಳಂತಹ ಮಿಟಿಯೋರಾಯ್ಡ್ಸ್ ಭೂಮಿಯ ವಾಯುಮಂಡಲ ಪ್ರವೇಶಿಸಿದಾಗ ಗಾಳಿಯ ಜತೆ ಸಂಘರ್ಷಕ್ಕೊಳಗಾಗುತ್ತವೆ. ತಿಕ್ಕಾಟದಿಂದ ಇವು ಉರಿಯತೊಡಗುತ್ತವೆ. ಭೂಮಿಗೆ ಗುರುತ್ವಾಕರ್ಷಣೆ ಇರುವುದರಿಂದ ಭೂಮಿ ಎಡೆಗೆ ಧಾವಿಸಿ ಮಿಂಚುವ ನಕ್ಷತ್ರಗಳಂತೆ ಕಂಡು ಕರಗಿ ಹೋಗುತ್ತವೆ. ಉರಿದು ಬೀಳುವ ಈ ಸ್ಥಿತಿಯಲ್ಲಿ ಇವಕ್ಕೆ ‘ಮೀಟಿಯೋರ್ಸ್’ ಉಲ್ಕೆಗಳೆಂದು ಕರೆಯಲಾಗುತ್ತದೆ.

ಇಂಥಹ ಅಸಂಖ್ಯಾತ ಉಲ್ಕೆಗಳ ಪಾತ ದಿನವೂ ಆಕಾಶದಲ್ಲಿ ನಡೆಯುತ್ತಲೇ ಇರುತ್ತದೆ. ಬೀಳುವ ನಕ್ಷತ್ರ ಉಲ್ಕೆಯು ಸಾವುನೋವಿನಂತಹ ವಿಪ್ಲವ ತರುತ್ತದೆನ್ನುವುದು ಜನಸಾಮಾನ್ಯರ ನಂಬಿಕೆಯಾಗಿದೆ. ಪ್ರತಿ ಮೂವತ್ಮೂರು ವರ್ಷಗಳ ಅಂತರದಲ್ಲಿ ಉಲ್ಕಾಪಾತ ಗಣನೀಯವಾಗಿ ಹೆಚ್ಚುತ್ತದೆಂದು ಖಗೋಳ ವಿಜ್ಞಾನಿಗಳ ಅಭಿಮತ. ಗಂಟೆಗೆ ೫೦ ರಿಂದ ೧೦೦ ರ ತನಕ ನವೆಂಬರ್ ತಿಂಗಳ ೧೮ ರ ಬೆಳಗಿನ ಜಾವ ೨-೧ಂ ಗಂಟೆಗೆ ಶಿಖರ ತಲುಪುವ ಈ ನಕ್ಷತ್ರ ಮಳೆ ಬರಿಕಣ್ಣಿಗೆ ವಿಜ್ಞಾನಿಗಳಿಗೆ ಕಂಡಿತು. ಲಿಯೋನಿಡ್ ಮಿಟಿಯೋರಾಯ್ಡ್ಸ್‌ ಎಂದು ವಿಜ್ಞಾನಿಗಳು ಹೆಸರಿಸಿರುವ ಈ ಆಕಾಶಕಾಯಗಳು ‘ಟೆಂಪಲ್‌ಟಟ್ಸ್’ ಎನ್ನುವ ಧೂಮಕೇತು ಉಳಿಸಿ ಹೋದ ಧೂಳು ಕಸದಿಂದ ನಿರ್ಮಾಣವಾದವು. ಭೂಮಿಯ ಮೇಲ್ಮೈ ತಲುಪುವ ವೇಳೆಗಾಗಲೇ ಉಷ್ಣತೆ ಕಳೆದುಕೊಂಡು ಮತ್ತೆ ಬಂಡೆಗಳಂತಾದಾಗ ಉಲ್ಕೆಗಳನ್ನು ಮಿಟಿಯೋರೈಟ್ಸ್ ಎಂದು ಕರೆಯುತ್ತಾರೆ. ಲೋಹ ರಾಸಾಯನಿಕಗಳ ಕಲ್ಲು ಧೂಳುನಿಂದ ಕೂಡಿದ ಉಲ್ಕೆಗಳು ಜೀವ ಸೃಷ್ಟಿಗೆ ಬೇಕಾದ ಕಚ್ಚಾ ಪದಾರ್ಥಗಳನ್ನು ಒದಗಿಸಬಲ್ಲವು ಎನ್ನುತ್ತಾರೆ. ಖಗೋಳ ವಿಜ್ಞಾನಿಗಳು. ೩೬ ವರ್ಷಗಳಿಗೊಮ್ಮೆ ಪಾತಗೊಳ್ಳುವ ಈ ಉಲ್ಕೆಗಳ ದೃಷ್ಟಿಯಿಂದ ಇದುವರೆಗೆ ಅಪಾಯಗಳಾದ ವರದಿಗಳಿಲ್ಲ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...