Home / ಕವನ / ಕವಿತೆ / ದೇವರೆಂದರೇನು ಅಜ್ಜ?

ದೇವರೆಂದರೇನು ಅಜ್ಜ?

“ದೇವರೆಂದರೇನು ಅಜ್ಜ, ದೇವರೆಂದರೇನು ?
ಹೇಳು ಅವನು ಯಾರು, ಏನು, ತಿಳಿಯಬೇಕು ನಾನೂ”

“ಬಾನು ಬುವಿಯ ಕೈಗೆ ಕೊಟ್ಟ ಬೆಳಕಿನೂರೆಗೋಲು,
ಜೀವ ಎಂದೊ ಕುಡಿದು ಮರೆತ ತಾಯಿಯೆದೆಯ ಹಾಲು,
ಕಲ್ಲು ಮಣ್ಣು ಬಳಸದೇನೆ ಕಟ್ಟಿಕೊಂಡ ಮನೆ.
ಏಸು, ಗಾಂಧಿ ಜೀವಜಲವ ಸುರಿಸಿ ಬೆಳೆದ ತೆನೆ.
ಎಂಥ ಮಾರುಕಟ್ಟೆಯಲ್ಲೂ ಸಿಗದ ಸರಕು ಮಗೂ,
ತಾಯ ಕಣ್ಣ ಬೆಳಕಿನಲ್ಲಿ ಹೊಳೆವ ತಾರೆ ಅದು.

“ದೇವರನ್ನೆ ಹೋಲುವುದು ರಾತ್ರಿ ತೆರೆದ ಬಾನು,
ತಲೆಯನೆತ್ತಿ ನೋಡಿದವರಿಗೆಲ್ಲ ಕಂಡರೂನು
ಮುಟ್ಟಬರದು, ಬೆನ್ನನಟ್ಟಿ ಹೋದರೂನು ಸಿಗದು,
ಇದೆ, ಇಲ್ಲ ಎರಡೂ ನಿಜ ತೆಕ್ಕೆಯೊಳಗೆ ಬರದು.
ಬಿತ್ತದೊಳಗೆ ಮಲಗಿರುವ ವೃಕ್ಷದಂತೆ ಅದು,
ಹೂವಿನೆದೆಯ ಮಾರ್ದವದಲಿ ಹರಿವ ಹಾಗೆ ಮಧು.

“ಎಷ್ಟೇ ಮಳೆ ಸುರಿದೂ ಅದು, ಗಾಳಿಯ ಥರ, ನೆನೆಯದು,
ಗಾಳಿ ಎಷ್ಟೆ ಬೀಸಿದರೂ, ಬೆಳಕಿನ ಥರ, ಅಲುಗದು,
ಮತ್ತೆ ಮತ್ತೆ ಮೊಗೆದರೂ ಕುಳಿ ಬೀಳದ ನೀರು,
ಕತ್ತಲ ಪಡೆ ಸೀಳಿ ನಡೆವ ತಂಬೆಳಕಿನ ತೇರು.
ನಮ್ಮ ಸುತ್ತ ಇದ್ದೂ ಅದು ನಮಗೆ ಸಿಗುವುದಲ್ಲ,
ಸಿಕ್ಕವರಿಗೆ ಕೂಡ ಆದನು ತಿಳಿಸಬರುವುದಿಲ್ಲ.

“ಮುಗಿಲ ರೆಕ್ಕೆ ಮಡಚಿ ಕುಂತ ಕಾಲವೆಂಬ ಹಕ್ಕಿ,
ಗ್ರಹ ತಾರಗಳದಕೆ ತಿನ್ನಲೆರಚಿದಂಥ ಅಕ್ಕಿ.
ಮ್ಮೆತುದಿಗಳೆ ಕಾಣದಂಥ ಮಹದಾಕೃತಿ ಅದು,
ಅಣುವಿನೆದುರ ಬೆಟ್ಟದಂತೆ ನಮ್ಮೆದುರಲಿ ಅದು.
ಹೀಗಿದ್ದೂ ಅದು ಸಣ್ಣನೆ ಕಣಕೂ ಕಿರಿದಂತೆ,
ಕೇಳುವ ನಮ್ಮೊಳಗಿನೊಳಗೆ ಅಣುವಾಗಿದೆಯಂತೆ!

“ದೇವರೆನುವುದೆಲ್ಲಕಿಂತ ತುಂಬ ಸರಳ ಮಗೂ.
ಆದರದನು ತಿಳಿದವರು ತುಂಬ ವಿರಳ ಮಗೂ”
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...