Home / ಕವನ / ಕವಿತೆ / ದೇವರೆಂದರೇನು ಅಜ್ಜ?

ದೇವರೆಂದರೇನು ಅಜ್ಜ?

“ದೇವರೆಂದರೇನು ಅಜ್ಜ, ದೇವರೆಂದರೇನು ?
ಹೇಳು ಅವನು ಯಾರು, ಏನು, ತಿಳಿಯಬೇಕು ನಾನೂ”

“ಬಾನು ಬುವಿಯ ಕೈಗೆ ಕೊಟ್ಟ ಬೆಳಕಿನೂರೆಗೋಲು,
ಜೀವ ಎಂದೊ ಕುಡಿದು ಮರೆತ ತಾಯಿಯೆದೆಯ ಹಾಲು,
ಕಲ್ಲು ಮಣ್ಣು ಬಳಸದೇನೆ ಕಟ್ಟಿಕೊಂಡ ಮನೆ.
ಏಸು, ಗಾಂಧಿ ಜೀವಜಲವ ಸುರಿಸಿ ಬೆಳೆದ ತೆನೆ.
ಎಂಥ ಮಾರುಕಟ್ಟೆಯಲ್ಲೂ ಸಿಗದ ಸರಕು ಮಗೂ,
ತಾಯ ಕಣ್ಣ ಬೆಳಕಿನಲ್ಲಿ ಹೊಳೆವ ತಾರೆ ಅದು.

“ದೇವರನ್ನೆ ಹೋಲುವುದು ರಾತ್ರಿ ತೆರೆದ ಬಾನು,
ತಲೆಯನೆತ್ತಿ ನೋಡಿದವರಿಗೆಲ್ಲ ಕಂಡರೂನು
ಮುಟ್ಟಬರದು, ಬೆನ್ನನಟ್ಟಿ ಹೋದರೂನು ಸಿಗದು,
ಇದೆ, ಇಲ್ಲ ಎರಡೂ ನಿಜ ತೆಕ್ಕೆಯೊಳಗೆ ಬರದು.
ಬಿತ್ತದೊಳಗೆ ಮಲಗಿರುವ ವೃಕ್ಷದಂತೆ ಅದು,
ಹೂವಿನೆದೆಯ ಮಾರ್ದವದಲಿ ಹರಿವ ಹಾಗೆ ಮಧು.

“ಎಷ್ಟೇ ಮಳೆ ಸುರಿದೂ ಅದು, ಗಾಳಿಯ ಥರ, ನೆನೆಯದು,
ಗಾಳಿ ಎಷ್ಟೆ ಬೀಸಿದರೂ, ಬೆಳಕಿನ ಥರ, ಅಲುಗದು,
ಮತ್ತೆ ಮತ್ತೆ ಮೊಗೆದರೂ ಕುಳಿ ಬೀಳದ ನೀರು,
ಕತ್ತಲ ಪಡೆ ಸೀಳಿ ನಡೆವ ತಂಬೆಳಕಿನ ತೇರು.
ನಮ್ಮ ಸುತ್ತ ಇದ್ದೂ ಅದು ನಮಗೆ ಸಿಗುವುದಲ್ಲ,
ಸಿಕ್ಕವರಿಗೆ ಕೂಡ ಆದನು ತಿಳಿಸಬರುವುದಿಲ್ಲ.

“ಮುಗಿಲ ರೆಕ್ಕೆ ಮಡಚಿ ಕುಂತ ಕಾಲವೆಂಬ ಹಕ್ಕಿ,
ಗ್ರಹ ತಾರಗಳದಕೆ ತಿನ್ನಲೆರಚಿದಂಥ ಅಕ್ಕಿ.
ಮ್ಮೆತುದಿಗಳೆ ಕಾಣದಂಥ ಮಹದಾಕೃತಿ ಅದು,
ಅಣುವಿನೆದುರ ಬೆಟ್ಟದಂತೆ ನಮ್ಮೆದುರಲಿ ಅದು.
ಹೀಗಿದ್ದೂ ಅದು ಸಣ್ಣನೆ ಕಣಕೂ ಕಿರಿದಂತೆ,
ಕೇಳುವ ನಮ್ಮೊಳಗಿನೊಳಗೆ ಅಣುವಾಗಿದೆಯಂತೆ!

“ದೇವರೆನುವುದೆಲ್ಲಕಿಂತ ತುಂಬ ಸರಳ ಮಗೂ.
ಆದರದನು ತಿಳಿದವರು ತುಂಬ ವಿರಳ ಮಗೂ”
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...