Home / ಕವನ / ಕವಿತೆ / ದೇವರೆಂದರೇನು ಅಜ್ಜ?

ದೇವರೆಂದರೇನು ಅಜ್ಜ?

“ದೇವರೆಂದರೇನು ಅಜ್ಜ, ದೇವರೆಂದರೇನು ?
ಹೇಳು ಅವನು ಯಾರು, ಏನು, ತಿಳಿಯಬೇಕು ನಾನೂ”

“ಬಾನು ಬುವಿಯ ಕೈಗೆ ಕೊಟ್ಟ ಬೆಳಕಿನೂರೆಗೋಲು,
ಜೀವ ಎಂದೊ ಕುಡಿದು ಮರೆತ ತಾಯಿಯೆದೆಯ ಹಾಲು,
ಕಲ್ಲು ಮಣ್ಣು ಬಳಸದೇನೆ ಕಟ್ಟಿಕೊಂಡ ಮನೆ.
ಏಸು, ಗಾಂಧಿ ಜೀವಜಲವ ಸುರಿಸಿ ಬೆಳೆದ ತೆನೆ.
ಎಂಥ ಮಾರುಕಟ್ಟೆಯಲ್ಲೂ ಸಿಗದ ಸರಕು ಮಗೂ,
ತಾಯ ಕಣ್ಣ ಬೆಳಕಿನಲ್ಲಿ ಹೊಳೆವ ತಾರೆ ಅದು.

“ದೇವರನ್ನೆ ಹೋಲುವುದು ರಾತ್ರಿ ತೆರೆದ ಬಾನು,
ತಲೆಯನೆತ್ತಿ ನೋಡಿದವರಿಗೆಲ್ಲ ಕಂಡರೂನು
ಮುಟ್ಟಬರದು, ಬೆನ್ನನಟ್ಟಿ ಹೋದರೂನು ಸಿಗದು,
ಇದೆ, ಇಲ್ಲ ಎರಡೂ ನಿಜ ತೆಕ್ಕೆಯೊಳಗೆ ಬರದು.
ಬಿತ್ತದೊಳಗೆ ಮಲಗಿರುವ ವೃಕ್ಷದಂತೆ ಅದು,
ಹೂವಿನೆದೆಯ ಮಾರ್ದವದಲಿ ಹರಿವ ಹಾಗೆ ಮಧು.

“ಎಷ್ಟೇ ಮಳೆ ಸುರಿದೂ ಅದು, ಗಾಳಿಯ ಥರ, ನೆನೆಯದು,
ಗಾಳಿ ಎಷ್ಟೆ ಬೀಸಿದರೂ, ಬೆಳಕಿನ ಥರ, ಅಲುಗದು,
ಮತ್ತೆ ಮತ್ತೆ ಮೊಗೆದರೂ ಕುಳಿ ಬೀಳದ ನೀರು,
ಕತ್ತಲ ಪಡೆ ಸೀಳಿ ನಡೆವ ತಂಬೆಳಕಿನ ತೇರು.
ನಮ್ಮ ಸುತ್ತ ಇದ್ದೂ ಅದು ನಮಗೆ ಸಿಗುವುದಲ್ಲ,
ಸಿಕ್ಕವರಿಗೆ ಕೂಡ ಆದನು ತಿಳಿಸಬರುವುದಿಲ್ಲ.

“ಮುಗಿಲ ರೆಕ್ಕೆ ಮಡಚಿ ಕುಂತ ಕಾಲವೆಂಬ ಹಕ್ಕಿ,
ಗ್ರಹ ತಾರಗಳದಕೆ ತಿನ್ನಲೆರಚಿದಂಥ ಅಕ್ಕಿ.
ಮ್ಮೆತುದಿಗಳೆ ಕಾಣದಂಥ ಮಹದಾಕೃತಿ ಅದು,
ಅಣುವಿನೆದುರ ಬೆಟ್ಟದಂತೆ ನಮ್ಮೆದುರಲಿ ಅದು.
ಹೀಗಿದ್ದೂ ಅದು ಸಣ್ಣನೆ ಕಣಕೂ ಕಿರಿದಂತೆ,
ಕೇಳುವ ನಮ್ಮೊಳಗಿನೊಳಗೆ ಅಣುವಾಗಿದೆಯಂತೆ!

“ದೇವರೆನುವುದೆಲ್ಲಕಿಂತ ತುಂಬ ಸರಳ ಮಗೂ.
ಆದರದನು ತಿಳಿದವರು ತುಂಬ ವಿರಳ ಮಗೂ”
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...