ಸ್ವಧರ್ಮ

ಎಲ್ಲೇ ಹೋಗಲಿ ನೀರು
ಕೆಳಹರಿಯುವುದೇಕೆ?
ಎಷ್ಟೇ ಒತ್ತಿದರು ಚಿಲುಮೆ
ಮೇಲುಕ್ಕುವುದೇಕೆ ?
ಮತ್ತೆ ಮತ್ತೆ ಕಡಿದರು ಮರ
ಸಿಟ್ಟು ಸೆಡವು ಮಾಡದೆ
ಎಂದಿನ ಹಾಗೇ ಮತ್ತೆ
ಫಲ ನೀಡುವುದೇಕೆ ?

ನೀರಿಗೆ ಸ್ವಧರ್ಮ ಮುಖ್ಯ
ಹರಿಯುವುದೇ ಧ್ಯೇಯ,
ಚಿಲುಮೆಗು ಮರಕ್ಕು ಅಷ್ಟೇ
ಚಿಮ್ಮುವುದೇ ಕಾರ್ಯ;
ಸ್ಥಧರ್ಮವೆಂದರೆ ಎಷ್ಟೂ
ಸ್ವಂತಕ್ಕಾಗಿರದೆ
ತನ್ನ ತಾನು ಉರಿಸಬೇಕು
ಉರಿಯುವಂತೆ ಸೂರ್ಯ.

ಸದಾ ಈ ನಡೆಯಲ್ಲೇ
ಆಡಿದೆ ಜಡಪ್ರಕೃತಿ,
ಸ್ವಧರ್ಮದಲ್ಲಿರು ಎಂದ
ಕೃಷ್ಣನಂಥ ಪ್ರಭೃತಿ:
ಸ್ವಧರ್ಮ ಎಂದರೆ ಋತ,
ಸೃಷ್ಟಿ ಎನುವ ರಥ
ಸುಲಲಿತ ಚಲಿಸಲಿ ಎಂದು
ರೂಪಿಸಿಟ್ಟ ಪಥ.

ಋತವೇ, ಪಥದೊಳಗೆಳೆದುಕೊ
ಸ್ವಾರ್ಥಿ ಮನುಜನನ್ನು;
ಬುದ್ಧಿಯುಟ್ಟು ಧರ್ಮದಿಂದ
ಹೊರನಡೆದವನನ್ನು;
ಇಂದ್ರಿಯಗಳನೂರಿ ಜಗವ
ಹೀರುವ ಭರದಲ್ಲಿ
ಬಾಳಿನ ನಿಜಸೌಂದರ್ಯಕೆ
ಕುರುಡಾದವನನ್ನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚುಟುಕು
Next post ಮೋಹನ ಗಿರಿಧರ

ಸಣ್ಣ ಕತೆ

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಜಂಬದ ಕೋಳಿ

    ಪ್ರಕರಣ ೩ ಜನಾರ್ದನ ಪುರದ ಹಳೆಯ ಇನ್ಸ್‍ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್‍ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು… Read more…