ಸ್ವಧರ್ಮ

ಎಲ್ಲೇ ಹೋಗಲಿ ನೀರು
ಕೆಳಹರಿಯುವುದೇಕೆ?
ಎಷ್ಟೇ ಒತ್ತಿದರು ಚಿಲುಮೆ
ಮೇಲುಕ್ಕುವುದೇಕೆ ?
ಮತ್ತೆ ಮತ್ತೆ ಕಡಿದರು ಮರ
ಸಿಟ್ಟು ಸೆಡವು ಮಾಡದೆ
ಎಂದಿನ ಹಾಗೇ ಮತ್ತೆ
ಫಲ ನೀಡುವುದೇಕೆ ?

ನೀರಿಗೆ ಸ್ವಧರ್ಮ ಮುಖ್ಯ
ಹರಿಯುವುದೇ ಧ್ಯೇಯ,
ಚಿಲುಮೆಗು ಮರಕ್ಕು ಅಷ್ಟೇ
ಚಿಮ್ಮುವುದೇ ಕಾರ್ಯ;
ಸ್ಥಧರ್ಮವೆಂದರೆ ಎಷ್ಟೂ
ಸ್ವಂತಕ್ಕಾಗಿರದೆ
ತನ್ನ ತಾನು ಉರಿಸಬೇಕು
ಉರಿಯುವಂತೆ ಸೂರ್ಯ.

ಸದಾ ಈ ನಡೆಯಲ್ಲೇ
ಆಡಿದೆ ಜಡಪ್ರಕೃತಿ,
ಸ್ವಧರ್ಮದಲ್ಲಿರು ಎಂದ
ಕೃಷ್ಣನಂಥ ಪ್ರಭೃತಿ:
ಸ್ವಧರ್ಮ ಎಂದರೆ ಋತ,
ಸೃಷ್ಟಿ ಎನುವ ರಥ
ಸುಲಲಿತ ಚಲಿಸಲಿ ಎಂದು
ರೂಪಿಸಿಟ್ಟ ಪಥ.

ಋತವೇ, ಪಥದೊಳಗೆಳೆದುಕೊ
ಸ್ವಾರ್ಥಿ ಮನುಜನನ್ನು;
ಬುದ್ಧಿಯುಟ್ಟು ಧರ್ಮದಿಂದ
ಹೊರನಡೆದವನನ್ನು;
ಇಂದ್ರಿಯಗಳನೂರಿ ಜಗವ
ಹೀರುವ ಭರದಲ್ಲಿ
ಬಾಳಿನ ನಿಜಸೌಂದರ್ಯಕೆ
ಕುರುಡಾದವನನ್ನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚುಟುಕು
Next post ಮೋಹನ ಗಿರಿಧರ

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…