Home / ಕವನ / ಕವಿತೆ / ಯಾರೋ ಒಬ್ಬನ ಸ್ವಗತ

ಯಾರೋ ಒಬ್ಬನ ಸ್ವಗತ

ಹನಿ ಹಾಕಲು ಹೊರಟ ಸಂಜಿ. ಮಳೆ ಬಿದ್ದೂ
ಕುಣಿಯದ ನವಿಲು. ಅರ್ಧ ಆಕಾಶವನ್ನೆ
ಮುಚ್ಚಿದೆ ಮುಗಿಲು. ಸಮೆದ ಬೆಣಚು ಕಲ್ಲಿನ
ತುಂಡು ಚಿಕ್ಕಿ, ಬಾನಿನಲ್ಲಿಲ್ಲ ಒಂದೇ ಒಂದು ಹಕ್ಕಿ
ಸ್ತಬ್ಧ ಗಿಡಮರ, ಥಂಡಿಗಾಳಿ, ನೇಸರನಿಲ್ಲದ ಸಭೆ
ಬೇಸರವೋ ಬೇಸರ.

ಏನು ಸಾಧಿಸಿದ್ದಾಯಿತು ಈ ತನಕ ?
ತಿಂದದ್ದು ಕುಡಿದದ್ದು ಕೊಳಕರ ಜೊತೆ ಕಲೆತದ್ದು
ಯಾರ್‍ಯಾರನ್ನೋ ಚುಚ್ಚಿ ಛೇಡಿಸಿ ವಿದೂಷಕನೆನಿಸಿದ್ದು
ಹಣಕ್ಕಾಗಿ ಹೆಣಗಿದ್ದು, ಎಲ್ಲೆಂದರಲ್ಲಿ ಅಲೆದದ್ದು
ದುಡ್ಡು ಗುಡ್ಡೆಹಾಕಿಯೂ ಜೀನನಾಗಿ ಬಾಳಿದ್ದು-
ಮುಗಿಯಿತಲ್ಲ ಎಲ್ಲ
ನದಿತನಕ ಹೋದದ್ದಷ್ಟೆ ಇಳಿಯಲಿಲ್ಲ
ಇಳಿದ ಒಂದೆರಡು ಸಲವೂ ಈಜಲಿಲ್ಲ.
ಬರಿ ಪ್ರತಿಷ್ಠೆಗಾಗಿ ಬರೆದದ್ದು ಯಾರನ್ನೂ ಮುಟ್ಟಲಿಲ,
ಒಂದು ಅಂತಃಕರಣವನ್ನೂ ತಟ್ಟಲಿಲ್ಲ
“ಇಲ್ಲ ಇಲ್ಲ ಏನನ್ನೂ ಮಾಡಲಿಲ್ಲ ಈತನು.”

ಇನ್ನೇನು ಬಂತು ರಾತ್ರಿ. ಬಿಚ್ಚುತ್ತಿದೆ ಇರುಳ ಜಡೆ,
ಉಂಡು ಮಲಗಿದರೆ ಅಲ್ಲಿಗೆ ಕಡೆ.
ಅಷ್ಟು ಹಿಂದೆ ಹುಟ್ಟಿ, ಇಷ್ಟರ ತನಕ ಬಾಳಿ,
ಛಿ ಇಷ್ಟೇನೇ ಎಂದು ಮರುಗುತ್ತಿದೆ ಇವನ ಚಿತ್ತ;
ಹೆಪ್ಪುಗಟ್ಟಿದ್ದು ಮತ್ತೆ ಹಾಲಾಗಲು ಸಾಧ್ಯವೆ ?
ಈಗ ಪಶ್ಚಾತ್ತಾಪವಷ್ಟೇ ನಿತ್ಯ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...