Home / ಕವನ / ಕವಿತೆ / ಯಾರೋ ಒಬ್ಬನ ಸ್ವಗತ

ಯಾರೋ ಒಬ್ಬನ ಸ್ವಗತ

ಹನಿ ಹಾಕಲು ಹೊರಟ ಸಂಜಿ. ಮಳೆ ಬಿದ್ದೂ
ಕುಣಿಯದ ನವಿಲು. ಅರ್ಧ ಆಕಾಶವನ್ನೆ
ಮುಚ್ಚಿದೆ ಮುಗಿಲು. ಸಮೆದ ಬೆಣಚು ಕಲ್ಲಿನ
ತುಂಡು ಚಿಕ್ಕಿ, ಬಾನಿನಲ್ಲಿಲ್ಲ ಒಂದೇ ಒಂದು ಹಕ್ಕಿ
ಸ್ತಬ್ಧ ಗಿಡಮರ, ಥಂಡಿಗಾಳಿ, ನೇಸರನಿಲ್ಲದ ಸಭೆ
ಬೇಸರವೋ ಬೇಸರ.

ಏನು ಸಾಧಿಸಿದ್ದಾಯಿತು ಈ ತನಕ ?
ತಿಂದದ್ದು ಕುಡಿದದ್ದು ಕೊಳಕರ ಜೊತೆ ಕಲೆತದ್ದು
ಯಾರ್‍ಯಾರನ್ನೋ ಚುಚ್ಚಿ ಛೇಡಿಸಿ ವಿದೂಷಕನೆನಿಸಿದ್ದು
ಹಣಕ್ಕಾಗಿ ಹೆಣಗಿದ್ದು, ಎಲ್ಲೆಂದರಲ್ಲಿ ಅಲೆದದ್ದು
ದುಡ್ಡು ಗುಡ್ಡೆಹಾಕಿಯೂ ಜೀನನಾಗಿ ಬಾಳಿದ್ದು-
ಮುಗಿಯಿತಲ್ಲ ಎಲ್ಲ
ನದಿತನಕ ಹೋದದ್ದಷ್ಟೆ ಇಳಿಯಲಿಲ್ಲ
ಇಳಿದ ಒಂದೆರಡು ಸಲವೂ ಈಜಲಿಲ್ಲ.
ಬರಿ ಪ್ರತಿಷ್ಠೆಗಾಗಿ ಬರೆದದ್ದು ಯಾರನ್ನೂ ಮುಟ್ಟಲಿಲ,
ಒಂದು ಅಂತಃಕರಣವನ್ನೂ ತಟ್ಟಲಿಲ್ಲ
“ಇಲ್ಲ ಇಲ್ಲ ಏನನ್ನೂ ಮಾಡಲಿಲ್ಲ ಈತನು.”

ಇನ್ನೇನು ಬಂತು ರಾತ್ರಿ. ಬಿಚ್ಚುತ್ತಿದೆ ಇರುಳ ಜಡೆ,
ಉಂಡು ಮಲಗಿದರೆ ಅಲ್ಲಿಗೆ ಕಡೆ.
ಅಷ್ಟು ಹಿಂದೆ ಹುಟ್ಟಿ, ಇಷ್ಟರ ತನಕ ಬಾಳಿ,
ಛಿ ಇಷ್ಟೇನೇ ಎಂದು ಮರುಗುತ್ತಿದೆ ಇವನ ಚಿತ್ತ;
ಹೆಪ್ಪುಗಟ್ಟಿದ್ದು ಮತ್ತೆ ಹಾಲಾಗಲು ಸಾಧ್ಯವೆ ?
ಈಗ ಪಶ್ಚಾತ್ತಾಪವಷ್ಟೇ ನಿತ್ಯ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...