ಮುಂದೆ ಹೋಗಿ ಸ್ವಾಮಿ

ನಿನ್ನೆ ಹಾಕಿದ್ದೆ ಓಟು
ಮತ್ತೆ ಬಂದಿರಿ ಇವತ್ತು!
ಏನು ಆಟವೆ ಸ್ವಾಮಿ ?
ಮುಂದೆ ಹೋಗಿ,
ಬೇಡುವುದಕ್ಕೂ ಒಂದು ಹೊತ್ತು ಗೊತ್ತಿಲ್ಲವೆ?
ನಗುತ್ತಿದ್ದಾರೆ ಎಲ್ಲ, ಮುಂದೆ ಹೋಗಿ.

ಅಲ್ಲಿ ಕಾರ್ಗಿಲ್ಲಿನಲ್ಲಿ ಉತ್ತರದೆತ್ತರದಲ್ಲಿ
ಯಜ್ಞ ನಡೆಯುತ್ತಿದೆ ಗೊತ್ತೆ ತಮಗೆ ?
ನಮ್ಮ ಹುಡುಗರ ಜೀವ ಆಜ್ಯಧಾರೆಯ ಹಾಗೆ
ಒಂದೆ ಸಮ ಸುರಿಯುತಿದೆ ಯುದ್ಧದುರಿಗೆ;
ಕಾದುವ ಹುಡುಗರ ತಂದೆ ತಾಯಿ ಹೆಂಡಿರ ದುಃಖ-
ಜ್ವಾಲೆ ಹಬ್ಬುತ್ತಿದೆ ಎಲ್ಲ ಕಡೆಗೆ.
ಇಂಥ ಹೊತ್ತಲ್ಲೂ ನಿಮ್ಮ ಆಟವೆ ನಿಮಗೆ!
ಬೇಡುವುದಕ್ಕೂ ಒಂದು ಹೊತ್ತು ಗೊತ್ತಿಲ್ಲವೆ ?
ಗೊತ್ತಾದ ಅವಧಿಗೆ ಮಾತ್ರ ಬನ್ನಿರಿ ತಾವು
ಕಂಡ ಕಂಡಾಗ ಅಲ್ಲ
ಮುಂದೆ ಹೋಗಿ.

ಕರುಳನಿರಿಯುವ ಚಳಿಯ ಇರುಳು, ಶಿಖರಗಳನ್ನು
ಏರುತ್ತ ಹೋರುತ್ತ,
ಬಂಕರಿನಲ್ಲಿ ಅಡಗಿ ಕೂತು
ಛಕ್ಕನೆ ಎದ್ದು
ಹೊಂಚಿ ಹೊಡೆಯುತ್ತ,
ಚುಕ್ಕಿಗಳ ಬಯಲಲ್ಲಿ
ಪತಾಕೆಯಂತೆ ಸೆಟೆದು
ತುಪಾಕಿ ಸಿಡಿಸುತ್ತ
ಅಂಗುಲ ಆಂಗುಲಕ್ಕೂ ಇಂಗುತಿದೆ ಜೀವಸಿರಿ;
ಆದರೂ ತಗ್ಗದೆ ಮೇಲಕ್ಕೆದ್ದಿದೆ ಉರಿ.
ಇಂಥ ಹೊತ್ತಲ್ಲೂ ಬರುತ್ತೀರಲ್ಲ ಹೀಗೆ!

ಸಾಕು ನಿಲ್ಲಿಸಿ ಶಂಖ, ಹಿಂದೆ ಕೇಳಿದ್ದೇ,
ಊದಬೇಡಿ ಮತ್ತೆ, ಮುಂದೆ ಹೋಗಿ
ಮುಂದೆ ಹೋಗಿ ಸ್ವಾಮಿ ಮುಂದೆ ಹೋಗಿ.

ಬೇಡ ಸ್ವಾಮೀ ನಿಮ್ಮ
ಚುನಾವಣೆಯ ಮಾತು,
ನಿಮ್ಮ ಯೋಗ್ಯತೆ ನಮಗೆ ಲಾಗಾಯ್ತಿನಿಂದಲೂ
ಚೆನ್ನಾಗಿ ಗೊತ್ತು;
ಶಾಕಿನಿ ಡಾಕಿನಿಯರ ರಕ್ತದಾಹಕ್ಕಾಗಿ
ಚೆನ್ನಾಗಿ ನಡೆದಿದ್ದ ರಥ ಉರುಳಿ ಬಿತ್ತು.
ಸರಿಯಾದ ಸಮಯಕ್ಕೆ ಹೊಂಚಿದ್ದ ಹುಲಿರಾಯ
ಬೇಲಿಯನ್ನೇ ಜಿಗಿದ
ಯುದ್ಧ ಬಂತು.
ಹೇಳಬೇಕೇ ತಮಗೆ ? ಎಲ್ಲ ಗೊತ್ತಲ್ಲ,
ಎಲ್ಲದರ ಹಿಂದೆ ತಾವೆ ಇದ್ದೀರಲ್ಲ ?
ಆದರೂ ಹೀಗೆ
ಹೊಸ ವೇಷ ಹಾಕಿ
ಬರಬಹುದೆ? ದಯಮಾಡಿ ಮುಂದೆ ಹೋಗಿ,
ಮುಂದೆ ಹೋಗಿ ಸ್ವಾಮಿ ಮುಂದೆ ಹೋಗಿ.

ಯಾರಿಗೆ ಚುನಾವಣೆ,
ಯಾತಕ್ಕೆ ಚುನಾವಣೆ?
ಪೆದ್ದು ಕುರಿಗಳ ಹಿಂಡ ಕಾಯಲಿಕ್ಕಾಗಿಯೇ ?
ಕೊಬ್ಬಿದ ತೋಳಗಳನ್ನು ಆಯಲಿಕ್ಕಾಗಿಯೇ ?
ಪಾರ್ಲಿಮೆಂಟ್ ಹಾಲಲ್ಲಿ
ಕುರ್ಚಿ ಮೈಕು ಹಿಡಿದು
ಕಾದಲಿಕ್ಕಾಗಿಯೇ?
ಕಾಯುವುದಿದ್ದರೆ ಹೋಗಿ ಗಡಿಗಳನ್ನು ಕಾಯಿರಿ,
ಕಾದುವುದಿದ್ದರೆ ಹೋಗಿ ವೈರಿ ಜೊತೆ ಕಾದಿರಿ.
ಚುನಾವಣೆಗೆ ನಿಮಗೆ ಹಕ್ಕು ಎಲ್ಲುಂಟು?
ಎರಡು ಸಾವಿರ ಕೋಟಿ ಯರ ಮನೆ ಗಂಟು ?
ಹೋಗಿ ಹೋಗಿ ಸ್ವಾಮಿ ಮುಂದೆ ಹೋಗಿ.
ಎಲ್ಲ ಸರಿಯಾದಾಗ, ಹೊತ್ತು ಗೊತ್ತು ತಿಳಿದು
ಮತ್ತೆ ಬಂದೀರಂತೆ
ಮುಂದೆ ಹೋಗಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಂಡಭೇರುಂಡ
Next post ತ್ಯಾಗಮಯಿ ನೀ ಪೂರ್ಣಮಯಿ

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…