ಮುಂದೆ ಹೋಗಿ ಸ್ವಾಮಿ

ನಿನ್ನೆ ಹಾಕಿದ್ದೆ ಓಟು
ಮತ್ತೆ ಬಂದಿರಿ ಇವತ್ತು!
ಏನು ಆಟವೆ ಸ್ವಾಮಿ ?
ಮುಂದೆ ಹೋಗಿ,
ಬೇಡುವುದಕ್ಕೂ ಒಂದು ಹೊತ್ತು ಗೊತ್ತಿಲ್ಲವೆ?
ನಗುತ್ತಿದ್ದಾರೆ ಎಲ್ಲ, ಮುಂದೆ ಹೋಗಿ.

ಅಲ್ಲಿ ಕಾರ್ಗಿಲ್ಲಿನಲ್ಲಿ ಉತ್ತರದೆತ್ತರದಲ್ಲಿ
ಯಜ್ಞ ನಡೆಯುತ್ತಿದೆ ಗೊತ್ತೆ ತಮಗೆ ?
ನಮ್ಮ ಹುಡುಗರ ಜೀವ ಆಜ್ಯಧಾರೆಯ ಹಾಗೆ
ಒಂದೆ ಸಮ ಸುರಿಯುತಿದೆ ಯುದ್ಧದುರಿಗೆ;
ಕಾದುವ ಹುಡುಗರ ತಂದೆ ತಾಯಿ ಹೆಂಡಿರ ದುಃಖ-
ಜ್ವಾಲೆ ಹಬ್ಬುತ್ತಿದೆ ಎಲ್ಲ ಕಡೆಗೆ.
ಇಂಥ ಹೊತ್ತಲ್ಲೂ ನಿಮ್ಮ ಆಟವೆ ನಿಮಗೆ!
ಬೇಡುವುದಕ್ಕೂ ಒಂದು ಹೊತ್ತು ಗೊತ್ತಿಲ್ಲವೆ ?
ಗೊತ್ತಾದ ಅವಧಿಗೆ ಮಾತ್ರ ಬನ್ನಿರಿ ತಾವು
ಕಂಡ ಕಂಡಾಗ ಅಲ್ಲ
ಮುಂದೆ ಹೋಗಿ.

ಕರುಳನಿರಿಯುವ ಚಳಿಯ ಇರುಳು, ಶಿಖರಗಳನ್ನು
ಏರುತ್ತ ಹೋರುತ್ತ,
ಬಂಕರಿನಲ್ಲಿ ಅಡಗಿ ಕೂತು
ಛಕ್ಕನೆ ಎದ್ದು
ಹೊಂಚಿ ಹೊಡೆಯುತ್ತ,
ಚುಕ್ಕಿಗಳ ಬಯಲಲ್ಲಿ
ಪತಾಕೆಯಂತೆ ಸೆಟೆದು
ತುಪಾಕಿ ಸಿಡಿಸುತ್ತ
ಅಂಗುಲ ಆಂಗುಲಕ್ಕೂ ಇಂಗುತಿದೆ ಜೀವಸಿರಿ;
ಆದರೂ ತಗ್ಗದೆ ಮೇಲಕ್ಕೆದ್ದಿದೆ ಉರಿ.
ಇಂಥ ಹೊತ್ತಲ್ಲೂ ಬರುತ್ತೀರಲ್ಲ ಹೀಗೆ!

ಸಾಕು ನಿಲ್ಲಿಸಿ ಶಂಖ, ಹಿಂದೆ ಕೇಳಿದ್ದೇ,
ಊದಬೇಡಿ ಮತ್ತೆ, ಮುಂದೆ ಹೋಗಿ
ಮುಂದೆ ಹೋಗಿ ಸ್ವಾಮಿ ಮುಂದೆ ಹೋಗಿ.

ಬೇಡ ಸ್ವಾಮೀ ನಿಮ್ಮ
ಚುನಾವಣೆಯ ಮಾತು,
ನಿಮ್ಮ ಯೋಗ್ಯತೆ ನಮಗೆ ಲಾಗಾಯ್ತಿನಿಂದಲೂ
ಚೆನ್ನಾಗಿ ಗೊತ್ತು;
ಶಾಕಿನಿ ಡಾಕಿನಿಯರ ರಕ್ತದಾಹಕ್ಕಾಗಿ
ಚೆನ್ನಾಗಿ ನಡೆದಿದ್ದ ರಥ ಉರುಳಿ ಬಿತ್ತು.
ಸರಿಯಾದ ಸಮಯಕ್ಕೆ ಹೊಂಚಿದ್ದ ಹುಲಿರಾಯ
ಬೇಲಿಯನ್ನೇ ಜಿಗಿದ
ಯುದ್ಧ ಬಂತು.
ಹೇಳಬೇಕೇ ತಮಗೆ ? ಎಲ್ಲ ಗೊತ್ತಲ್ಲ,
ಎಲ್ಲದರ ಹಿಂದೆ ತಾವೆ ಇದ್ದೀರಲ್ಲ ?
ಆದರೂ ಹೀಗೆ
ಹೊಸ ವೇಷ ಹಾಕಿ
ಬರಬಹುದೆ? ದಯಮಾಡಿ ಮುಂದೆ ಹೋಗಿ,
ಮುಂದೆ ಹೋಗಿ ಸ್ವಾಮಿ ಮುಂದೆ ಹೋಗಿ.

ಯಾರಿಗೆ ಚುನಾವಣೆ,
ಯಾತಕ್ಕೆ ಚುನಾವಣೆ?
ಪೆದ್ದು ಕುರಿಗಳ ಹಿಂಡ ಕಾಯಲಿಕ್ಕಾಗಿಯೇ ?
ಕೊಬ್ಬಿದ ತೋಳಗಳನ್ನು ಆಯಲಿಕ್ಕಾಗಿಯೇ ?
ಪಾರ್ಲಿಮೆಂಟ್ ಹಾಲಲ್ಲಿ
ಕುರ್ಚಿ ಮೈಕು ಹಿಡಿದು
ಕಾದಲಿಕ್ಕಾಗಿಯೇ?
ಕಾಯುವುದಿದ್ದರೆ ಹೋಗಿ ಗಡಿಗಳನ್ನು ಕಾಯಿರಿ,
ಕಾದುವುದಿದ್ದರೆ ಹೋಗಿ ವೈರಿ ಜೊತೆ ಕಾದಿರಿ.
ಚುನಾವಣೆಗೆ ನಿಮಗೆ ಹಕ್ಕು ಎಲ್ಲುಂಟು?
ಎರಡು ಸಾವಿರ ಕೋಟಿ ಯರ ಮನೆ ಗಂಟು ?
ಹೋಗಿ ಹೋಗಿ ಸ್ವಾಮಿ ಮುಂದೆ ಹೋಗಿ.
ಎಲ್ಲ ಸರಿಯಾದಾಗ, ಹೊತ್ತು ಗೊತ್ತು ತಿಳಿದು
ಮತ್ತೆ ಬಂದೀರಂತೆ
ಮುಂದೆ ಹೋಗಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಂಡಭೇರುಂಡ
Next post ತ್ಯಾಗಮಯಿ ನೀ ಪೂರ್ಣಮಯಿ

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

cheap jordans|wholesale air max|wholesale jordans|wholesale jewelry|wholesale jerseys