Home / ಕವನ / ಕವಿತೆ / ಲೋಕೇಶಿಯ ಕಥಾಪ್ರಸಂಗ

ಲೋಕೇಶಿಯ ಕಥಾಪ್ರಸಂಗ

ಮುಗಿದು ಹೋಯಿತೆಲ್ಲೋ ಲೋಕೇಶಿ
ನಿನ್ನ ಕಥೆ
ನೆಗದು ಬಿತ್ತಲ್ಲೋ ಕೋಟೆ
ಹುಡುಗನೊಬ್ಬ ಸೇದಿ ಬಿಸಾಡಿದ ಬೀಡಿಯ ಬೆಂಕಿಗೆ
ಧಗಧಗಿಸಿ ಹೋಯಿತಲ್ಲೋ ನಿನ್ನ ಸುವರ್ಣಲಂಕೆ !
ಆನೆ ಅಂಬಾರಿ ಛತ್ರ ಆಂತಃಪುರ ಎಲ್ಲ
ಮಣ್ಣು ಮುಕ್ಕಿ ಹೋಯಿತಲ್ಲೋ ಮಂಕೆ!

ಹಾಯ್ ಬೆಂಗಳೂರೇ, ಹಾಯ್ ಬೆಂಗಳೂರೇ
ಏನು ಸೇರಿದ್ದಾರೆ ಜನ ಜಂಗೀಕುಸ್ತಿಗೆ!
ಬೆರಗಾಗಿದ್ದಾರೆ ಎಲ್ಲ, ಹುಡುಗ ಹಾಕುವ ಪಟ್ಟಿಗೆ
ಹೇಳುತ್ತಾನೆ ಅವರಲ್ಲೊಬ್ಬ:
ಭಲೆ, ಹೇಗೆ ಹೂಡೆದ ಒಂದೇ ಏಟಿಗ ಅಬ್ಬ!
ಕೈ ಹಿಡಿದರೆ ಕತ್ತು ಹಿಡಿದ
ಕಾಲೆಳಿದರೆ ಸೊಂಟ ಮುರಿದ
‘ಏ ಕುರುಡ, ಏ ಕುರುಡ’ ಎಂದು ಎಳೆದಾಡುತ್ತ
ಬಿಸಿ ಬಾಣಲಿಗೆ ಹಾಕಿ ಹುಳ ಎಂಬಂತೆ ಹುರಿದ.
ಒಂದು ವಿಕೆಟ್ಟೂ ತೆಗೆಯದೆ ನೂರು ರನ್ನಿನ ಸೋಲು!
ದೇವರೇ
ಹೀಗೆ ಹೊಡೆಸಿಕೊಳ್ಳುವ ಬದಲು
ಲೋಟಾ ನೀರಲ್ಲಿ ಹಾರಿ
ಆತ್ಮಹತ್ಯೆ ಮಾಡಿಕೊಳ್ಳುವುದು ಮೇಲು!

ಹಿಂದೆ ಹೇಗಿತ್ತಲ್ಲೊ ಲೋಕೇಶಿ
ನಿನ್ನ ಪದಶಕ್ತಿ, ಸಿದ್ಧಿ!
ಯಾಕಾಯಿತೊ ಅದೀಗ ಹೀಗೆ
ಮುದಿಕತ್ತೆಯ ಲದ್ದಿ ?
ಹೇಗಿದ್ದವನು ಹೇಗಾದೆ,
ಏ ಕುದುರೆ! ಯಾಕೆ ಇಂಥ ಕತ್ತೆಯಾದೆ?
ಕಣ್ಣು ಕಾಣದಿದ್ದರೆ ಹೋಗಲಿ
ಬೇಡವೆ ಬುದ್ಧಿ,
ಯಾಕಾದರೂ ಸುಮ್ಮನಿರದೆ ಸವಾಲು ಕೊಟ್ಟೆ
ಯಾಕಾದರೂ ಹುಲಿಬಾಯಲ್ಲಿ ತಲೆ ಇಟ್ಟೆ?

ಪಾಪ!
ಎಂಥ ನಿನಗೆ ಎಂಥ ಗತಿ!
ಅಲ್ಲ ಸಲ್ಲದವರ ಮೇಲೆಲ್ಲ
ಸುಳ್ಳೇ ಬಗುಳಿದ್ದ ಕೇಡಿಗೆ
ಈಗ ಎಂಜಲ ಹೊಂಡದಲ್ಲಿ
ಪಬ್ಲಿಕ್ಕಾಗಿ ತಿಥಿ.
ತೊಡೆ ಹೊಟ್ಟೆ ಕೆನ್ನೆ ದವಡೆ ಅಂತ
ಹಾಗೆ ಮುಟ್ಟಿ ಮುಟ್ಟಿ ನೋಡಿಕೊಳ್ಳಬೇಡ ಗಾಯ!
ನೋಡುತ್ತಿದ್ದಾರೆ
ಲಕ್ಷ ಲಕ್ಷ ಜನ
ಚಪ್ಪಾಳೆ ಹಾಕಿ
ನಗದೆ ಇರುತ್ತಾರೆಯೇ ಮಾರಾಯ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...