Home / ಕವನ / ಕವಿತೆ / ಲೋಕೇಶಿಯ ಕಥಾಪ್ರಸಂಗ

ಲೋಕೇಶಿಯ ಕಥಾಪ್ರಸಂಗ

ಮುಗಿದು ಹೋಯಿತೆಲ್ಲೋ ಲೋಕೇಶಿ
ನಿನ್ನ ಕಥೆ
ನೆಗದು ಬಿತ್ತಲ್ಲೋ ಕೋಟೆ
ಹುಡುಗನೊಬ್ಬ ಸೇದಿ ಬಿಸಾಡಿದ ಬೀಡಿಯ ಬೆಂಕಿಗೆ
ಧಗಧಗಿಸಿ ಹೋಯಿತಲ್ಲೋ ನಿನ್ನ ಸುವರ್ಣಲಂಕೆ !
ಆನೆ ಅಂಬಾರಿ ಛತ್ರ ಆಂತಃಪುರ ಎಲ್ಲ
ಮಣ್ಣು ಮುಕ್ಕಿ ಹೋಯಿತಲ್ಲೋ ಮಂಕೆ!

ಹಾಯ್ ಬೆಂಗಳೂರೇ, ಹಾಯ್ ಬೆಂಗಳೂರೇ
ಏನು ಸೇರಿದ್ದಾರೆ ಜನ ಜಂಗೀಕುಸ್ತಿಗೆ!
ಬೆರಗಾಗಿದ್ದಾರೆ ಎಲ್ಲ, ಹುಡುಗ ಹಾಕುವ ಪಟ್ಟಿಗೆ
ಹೇಳುತ್ತಾನೆ ಅವರಲ್ಲೊಬ್ಬ:
ಭಲೆ, ಹೇಗೆ ಹೂಡೆದ ಒಂದೇ ಏಟಿಗ ಅಬ್ಬ!
ಕೈ ಹಿಡಿದರೆ ಕತ್ತು ಹಿಡಿದ
ಕಾಲೆಳಿದರೆ ಸೊಂಟ ಮುರಿದ
‘ಏ ಕುರುಡ, ಏ ಕುರುಡ’ ಎಂದು ಎಳೆದಾಡುತ್ತ
ಬಿಸಿ ಬಾಣಲಿಗೆ ಹಾಕಿ ಹುಳ ಎಂಬಂತೆ ಹುರಿದ.
ಒಂದು ವಿಕೆಟ್ಟೂ ತೆಗೆಯದೆ ನೂರು ರನ್ನಿನ ಸೋಲು!
ದೇವರೇ
ಹೀಗೆ ಹೊಡೆಸಿಕೊಳ್ಳುವ ಬದಲು
ಲೋಟಾ ನೀರಲ್ಲಿ ಹಾರಿ
ಆತ್ಮಹತ್ಯೆ ಮಾಡಿಕೊಳ್ಳುವುದು ಮೇಲು!

ಹಿಂದೆ ಹೇಗಿತ್ತಲ್ಲೊ ಲೋಕೇಶಿ
ನಿನ್ನ ಪದಶಕ್ತಿ, ಸಿದ್ಧಿ!
ಯಾಕಾಯಿತೊ ಅದೀಗ ಹೀಗೆ
ಮುದಿಕತ್ತೆಯ ಲದ್ದಿ ?
ಹೇಗಿದ್ದವನು ಹೇಗಾದೆ,
ಏ ಕುದುರೆ! ಯಾಕೆ ಇಂಥ ಕತ್ತೆಯಾದೆ?
ಕಣ್ಣು ಕಾಣದಿದ್ದರೆ ಹೋಗಲಿ
ಬೇಡವೆ ಬುದ್ಧಿ,
ಯಾಕಾದರೂ ಸುಮ್ಮನಿರದೆ ಸವಾಲು ಕೊಟ್ಟೆ
ಯಾಕಾದರೂ ಹುಲಿಬಾಯಲ್ಲಿ ತಲೆ ಇಟ್ಟೆ?

ಪಾಪ!
ಎಂಥ ನಿನಗೆ ಎಂಥ ಗತಿ!
ಅಲ್ಲ ಸಲ್ಲದವರ ಮೇಲೆಲ್ಲ
ಸುಳ್ಳೇ ಬಗುಳಿದ್ದ ಕೇಡಿಗೆ
ಈಗ ಎಂಜಲ ಹೊಂಡದಲ್ಲಿ
ಪಬ್ಲಿಕ್ಕಾಗಿ ತಿಥಿ.
ತೊಡೆ ಹೊಟ್ಟೆ ಕೆನ್ನೆ ದವಡೆ ಅಂತ
ಹಾಗೆ ಮುಟ್ಟಿ ಮುಟ್ಟಿ ನೋಡಿಕೊಳ್ಳಬೇಡ ಗಾಯ!
ನೋಡುತ್ತಿದ್ದಾರೆ
ಲಕ್ಷ ಲಕ್ಷ ಜನ
ಚಪ್ಪಾಳೆ ಹಾಕಿ
ನಗದೆ ಇರುತ್ತಾರೆಯೇ ಮಾರಾಯ!
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...