ನೀರಿರದ ಮೋಡಕ್ಕೆ

ಇಲ್ಲಿದ್ದವರೆ ನೀವು
ಹಿಂದೆ ಒಮ್ಮೆ
ಈಗ ಅಲ್ಲಿದ್ದೀರಿ ದೂರ, ಅಷ್ಟೆ
ಎಲ್ಲೋ ಮೇಲಿದ್ದರೂ,
ಇಲ್ಲದ ಗಾಂಬೀರ್‍ಯ, ಹೊತ್ತು ದಿಕ್ಕಿಂದ ದಿಕ್ಕಿಗೆ
ಒಂದೇ ಸಮನೆ ನೀವು
ಠಳಾಯಿಸುತ್ತಿದ್ದರೂ
ನಿಮ್ಮ ಗುರುತಿದೆ ನಮಗೆ ಖಿಚಿತವಾಗಿ
ಹೇಳಬೇಕೆ ಪೂರ್ವಕಥೆಯನೆಲ್ಲ
ಉಚಿತವಾಗಿ ?

ಇಲ್ಲಿದ್ದಾಗ ನೀವು
ತುಂಬಿಕೊಂಡದ್ದು ಹೇಗೆ, ಎಲ್ಲ ಗೊತ್ತಲ್ಲ !
ಎಲ್ಲ ದಿಕ್ಕಿನಿಂದಲೂ ತೊರೆ ಹಳ್ಳ ಕೊಳ್ಳ
ಕೂಡಿ ಹರಿದವು ಒಂದೆ ಮೈಯಾಗಿ ನಿಮ್ಮೆಡೆಗೆ,
ನೀವಿದ್ದ ತಗ್ಗಿಗೆ.
ಬಂದು ತಲುಪಿದ್ದೆಲ್ಲ ನಿಮ್ಮದೆಂದಾಯಿತು,
ಡೊಡ್ಡ ತಗ್ಗಾಗಿದ್ದೆ ನಿಮಗೆ ವರವಾಯಿತು.

ಸಲ್ಲದ್ದು ಬೇಕಾದಷ್ಟಿತ್ತು ನಿಮ್ಮಲ್ಲಿ
ತುಂಬಿಕೊಂಡಿದ್ದರೂ ದೊಡ್ಡಕಡಲಲ್ಲಿ
ಯಾರಿಗೂ ಹನಿ ನೀರು
ಕೊಡಲಾಗಲಿಲ್ಲ
ನೀವು ಇದ್ದದ್ದೆ ಹಾಗೆ, ಕೊಡುವಂತಿರಲಿಲ್ಲ
ಉಪ್ಪುನೀರನ್ನು ಯಾವ ಬೆಪ್ಪ ಕುಡಿದಾನು ?
ಎಷ್ಟೇ ವಿಶಾಲವಾಗಿ ಕಂಡರೂ ಏನಂತೆ
ಚಿಕ್ಕ ಕೆರೆಗಿಂತಲೂ,
ನಲ್ಲಿಬಾಯಲ್ಲಿ ಬರುವ ಕಿರುಬೆರಳ ದಪ್ಪದ
ಜಲಧಾರೆಗಿಂತಲೂ ಕನಿಷ್ಠವಾಗಿದ್ದಿರಿ,
ಬಾಯಾರಿದವರನೂ ತಣಿಸಲಾಗದ ಹಾಗೆ
ಅನಿಷ್ಟವಾಗಿದ್ದಿರಿ.
ಸುತ್ತ ಮುತ್ತ ಎಲ್ಲ ತುರುಗಿಕೊಂಡಿದ್ದರೂ
ಮುಟ್ಟಲಾಗದ ನಿಮ್ಮ
ಉಪ್ಪು ಬದುಕಿಗೆ ಮರುಗಿ
ಕರಗಿದನು ಭಾನು.
ಪ್ರಖರ ಬಿಸಿಲಿನ ಶಾಖ ಬಿದ್ದು ಮೇಲೆದ್ದಿರಿ ;
ಅದೃಷ್ಟವಿದ್ದುದರಿಂದ
ಗಾಳಿಯ ಬೆನ್ನು ಹತ್ತಿ
ನಿಮ್ಮನ್ನೇ ಬೆಚ್ಚಿಸುವ ಬಾರೀ ಎತ್ತರಕೆ
ಯಾರೂ ಕಾಣದ ಹಾಗೆ
ಹೋಗಿ ಸೇರಿದಿರಿ.
ಈಗ ಹರಡಿದ್ದೀರಿ ಆಗಸದ ತುಂಬ
ಆದರೇನು ?
ಬೆರಗಾಗುವರು ಯಾರು ಸುಳ್ಳು ದಂಭಕ್ಕೆ ?
ನೀರೇ ಇಲ್ಲದ ಖಾಲಿ ಮುಗಿಲ ಠೀವಿಯನು
ಬಯ್ಯುವವರೇ ಎಲ್ಲ – “ಏನೆಂದರೇನೂ ಇಲ್ಲ”

ತೇವವಿಲ್ಲದ ಮುಗಿಲು ನೀಲಿ ಬಾಲಿನ ಮೈಗೆ
ತೊನ್ನು ಎನುವಂತಿದೆ.
ಒಳಗೆ ಜಲವಿಲ್ಲ, ಕೊಡುವ ಬಲವಿಲ್ಲ,
ಕೆಳಗೆ ದಡದಡ ಸುರಿದು
ಮಣ್ಣೊಳಗೆ ಇಳಿದು
ಬೆಳೆವ ಕಸುವಿಲ್ಲ.
ಎಳೆಗಾಳಿ, ತೆಳುಗಾಳಿ ಎಂಥ ಕ್ಷುದ್ರವೆ ಇರಲಿ
ಅದು ಎಳೆದ ದಿಕ್ಕಿಗೇ ಇದರ ಓಟ,
ಆಡಿಸುತ್ತಿದ್ದಾರೆ ಎಲ್ಲ ಆಟ!

ಇಲ್ಲದ್ದು ಹೋಗಿ ಇರುವುದೆಂದು ಬಂದೀತೋ
ಎಂದು ಕೊರಗುತ್ತಿದೆ ಕೆಳಗೆ ಜನವೆಲ್ಲ.
ಜಲಸುರಿವ ಮೋಡಕ್ಕೆ ಕಾಯುತ್ತ ನಿಂತಿವೆ
ಬಾಯ್ತೆರೆದುಕೊಂಡಿರುವ ಹಳ್ಳ ಕೊಳ್ಳ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತೆರಿಗೆ ಮತ್ತು ತೇರು
Next post ನೂರು ನೋವ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

cheap jordans|wholesale air max|wholesale jordans|wholesale jewelry|wholesale jerseys