ದೆವ್ವಗಳ ಸ್ನೇಹ

ನಡುರಾತ್ರಿ ದೆವ್ವಗಳು
ಬಾಗಿಲನ್ನು ಬಡಿದವು,
ಯಾರೋ ಎಂದು ತೆರೆದೆ.
ಕಾಲಮೇಲೆ ಬಿದ್ದು
ಮುಳುಮುಳನೆ ಅತ್ತವು,
ಪಾಪ! ಒಳಕ್ಕೆ ಕರೆದೆ.
ದೀನಮುಖ ಮಾಡಿ
ಕೈ ಹಿಡಿದು ಬೇಡಿದವು
ಜೊತೆಹೋಗಲೊಪ್ಪಿದೆ.

ಅವು
ಇಟ್ಟ ಬೀದಿಗಳಲ್ಲಿ
ಬೀಗಿ ನಡೆದೆ,
ತೆರೆದ ಹಳ್ಳಗಳನ್ನು
ಕೂಗಿ ಜಿಗಿದೆ.
ಕೊಟ್ಟ ತೀರ್ಥ ಕುಡಿದೆ
ಬಿಟ್ಟ ಹೆಣ್ಣನ್ನು ಮಿಡಿದೆ,
ಆಕಾಶಕ್ಕೆ ಮುಖ ಮಾಡಿ
ಸೂರ್ಯನಿಗೇ ಉಗಿದೆ,
ನೆಗೆದೆ.

ದೆವ್ವಗಳು ಕಲಿಸಿದ್ದೆಲ್ಲ
ಬಲು ವಿಚಿತ್ರ.
ನಾಲ್ಕರಲ್ಲಿ ಎಂಟು ಕಳೆಯಬಹುದು,
ದಶಕದ ನೆರವಿಲ್ಲದೆ.
ಹೆಜ್ಜೆ ಊರದೆ ನೆಲಕ್ಕೆ ನಡೆಯಬಹುದು
ಭಾರದ ಅರಿವಿಲ್ಲದೆ.
ಬೆಟ್ಟವನ್ನೇ ಬಗೆದು
ಗಾಳಿಯನ್ನೇ ಸಿಗಿದು
ಹೊಳೆಯಲ್ಲೂ ಮುಳುಗಬಹುದು,
ಕೂದಲೇ ನೆನೆಯದೆ.

ಆದರೆ ಒಂದು ವಿಷಯ :
ನೊಂದ ಜೀವಕ್ಕೆ ಮರುಗಿ
ಕಂಬನಿಯೊಂದ ಹಾಕಲು,
ತನ್ನ ಬೆವರೇ ಹರಿಸಿ
ತಿನ್ನುವ ಅನ್ನ ಬೇಯಿಸಲು,
ತರ್ಕ ಬಿಟ್ಟು ದೇವಾಲಯಕ್ಕೆ
ಸುತ್ತೊಂದನ್ನು ಹಾಕಲು
ಆಗುವುದೇ ಇಲ್ಲ.
ಬಲು ಎಚಿತ್ರ ಎಂದರೆ
ಒಳಗಡೆ ಮಗು ಚೀರಿತೆನ್ನಿ,
ಕತ್ತು ಹಿಸುಕಿ ಕೊಂದಲ್ಲದೆ
ನಿದ್ದೆ ಬರುವುದಿಲ್ಲ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೊಕ್ಕರೆ
Next post ಪ್ರಿಯತಮೆ ನಿನ್ನ

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…