ಆತ್ಮಾರ್ಪಣೆ

ಆಹಾ ದೆವ್ವ ನೀ ಎಂಥ ಸುಖ – ನಿನ್ನ
ಬೆಚ್ಚನೆ ತೆಕ್ಕಯೊಳೆಂಥ ಸುಖ,
ಊರ ಹೊರಗಿನ ಕೆರೆಯ ಆಳಕ್ಕೆ,
ಇಳಿಸಿ ಈಜಿಸಿದೆ ತಡಿತನಕ

ಬಿಯರಿನ ಕಹಿಯಲಿ ಏನು ಮಜ,
ವಿಸ್ಕಿಯ ಒಗರೇ ಅಮೃತ ನಿಜ !
‘ಸಿಗರೇಟಿನ ಹೊಗೆ ವರ್ತುಳ ವರ್ತುಳ’
ಇಸ್ಟೀಟಿಗೆ ಬೇಕಿಲ್ಲ ರಜ!

ಇಟ್ಟೆ ಪಾದದಲಿ ತಲೆಯನ್ನು- ಬಲಿ
ಬಿಟ್ಟೆನು ಬರೆಯುವ ಬೆರಳನ್ನು,
ಪಂಚೇಂದ್ರಿಯಗಳ ಮೀಸಲು ಮಾಡಿ
ಹೀರಿದೆ ಪಂಚಾಮೃತವನ್ನು.

ಯಾಕೆ ಹೊಸಿಲಾಚೆ ನಿಂತಿರುವೆ – ಈ
ಮನೆಯೊಳಗೇ ನೀ ಬಂದುಬಿಡು,
ಖಾಲಿ ಮಾಡಿಸುವೆ ದೇವರ ಮನೆಯ
ಅಲ್ಲೆ ಇನ್ನು ನೀನಿದ್ದು ಬಿಡು.

ಆಹಾ ದೆವ್ವ! ಶರಣಾದೆ ಗುರು – ನೀ
ಗಸ್ತು ಕಾಯುತ್ತ ಜೊತಗೆ ಇರು,
ಕೆಚ್ಚಲ ಉಣಿಸಿ ಲೋಕ ತೋರಿಸಿದೆ
ಕಾಮಧೇನು ನಾ ನಿನ್ನ ಕರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಗ್ನ
Next post ಜೀವ ಜೀವದ ಗೆಳೆಯ

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

cheap jordans|wholesale air max|wholesale jordans|wholesale jewelry|wholesale jerseys