ಆತ್ಮಾರ್ಪಣೆ

ಆಹಾ ದೆವ್ವ ನೀ ಎಂಥ ಸುಖ – ನಿನ್ನ
ಬೆಚ್ಚನೆ ತೆಕ್ಕಯೊಳೆಂಥ ಸುಖ,
ಊರ ಹೊರಗಿನ ಕೆರೆಯ ಆಳಕ್ಕೆ,
ಇಳಿಸಿ ಈಜಿಸಿದೆ ತಡಿತನಕ

ಬಿಯರಿನ ಕಹಿಯಲಿ ಏನು ಮಜ,
ವಿಸ್ಕಿಯ ಒಗರೇ ಅಮೃತ ನಿಜ !
‘ಸಿಗರೇಟಿನ ಹೊಗೆ ವರ್ತುಳ ವರ್ತುಳ’
ಇಸ್ಟೀಟಿಗೆ ಬೇಕಿಲ್ಲ ರಜ!

ಇಟ್ಟೆ ಪಾದದಲಿ ತಲೆಯನ್ನು- ಬಲಿ
ಬಿಟ್ಟೆನು ಬರೆಯುವ ಬೆರಳನ್ನು,
ಪಂಚೇಂದ್ರಿಯಗಳ ಮೀಸಲು ಮಾಡಿ
ಹೀರಿದೆ ಪಂಚಾಮೃತವನ್ನು.

ಯಾಕೆ ಹೊಸಿಲಾಚೆ ನಿಂತಿರುವೆ – ಈ
ಮನೆಯೊಳಗೇ ನೀ ಬಂದುಬಿಡು,
ಖಾಲಿ ಮಾಡಿಸುವೆ ದೇವರ ಮನೆಯ
ಅಲ್ಲೆ ಇನ್ನು ನೀನಿದ್ದು ಬಿಡು.

ಆಹಾ ದೆವ್ವ! ಶರಣಾದೆ ಗುರು – ನೀ
ಗಸ್ತು ಕಾಯುತ್ತ ಜೊತಗೆ ಇರು,
ಕೆಚ್ಚಲ ಉಣಿಸಿ ಲೋಕ ತೋರಿಸಿದೆ
ಕಾಮಧೇನು ನಾ ನಿನ್ನ ಕರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಗ್ನ
Next post ಜೀವ ಜೀವದ ಗೆಳೆಯ

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…