ಗೆಳೆಯನ ಜೊತೆ ಸಮಾಲೋಚನೆ

ಈಚೆಗೆ ಯಾಕೋ ತುಂಬ
ಸಣ್ಣಗಾಗಿದ್ದೀರಿ ಅಂತ
ಗೆಳೆಯರು ಪರಿಚಿತರೆಲ್ಲ ಹೇಳಲು ಶುರುಮಾಡಿದರು.
ನನಗೇನಾಗಿದೆ ಧಾಡಿ
ಧಾಂಡಿಗನಂತಿದ್ದೀನಿ –
ಆಂತಾ ದಿನಾ ಹೇಳಿ ಹೇಳಿ
ಬಾಯಿ ಒಣಗಿ ಹೋಯಿತು.
ಮೊನ್ನೆ ಇವಳೂ ಒಮ್ಮೆ
ಮೆಲ್ಲಗೆ ಹತ್ತಿರ ಬಂದು
“ಯಾಕೀಥರ ಇದ್ದೀರಿ ?
ಪೂರಾ ಬಾಡಿದ್ದೀರಿ,
ನನ್ನೆದುರೂ ಗುಟ್ಟೆ” ಅಂತ
ಕಣ್ಣಲ್ಲಿ ನೀರು ತಂದಳು.
ಯಾಕೋ ವಿಪರೀತಕ್ಕೆ ಹೋಗುತ್ತಿದೆ ಎನಿಸಿತು
ನುಂಗಿದ್ದನ್ನು ಕಕ್ಕದೆ ವಿಧಿಯಿಲ್ಲ ಎನಿಸಿತು.

ನಾಡಿಗ ಬಂದರು ಮೊನ್ನೆ
ಮೇಲೆ ಬನ್ನಿ ಅಂದೆ.
ಪಕ್ಕ ಕೂತು ದನಿ ತಗ್ಗಿಸಿ
ಆಪ್ತವಾಗಿ ಹೇಳಿದೆ :
“ಬಲು ರಹಸ್ಯ ವಿಷಯ ನೋಡಿ
ಗೇಟು ದಾಟುವಂಥದಲ್ಲ
ಇವಳಿಗಂತೂ ಅಪ್ಪಿತಪ್ಪಿ ಕೂಡ ತಲುಪುವಂಥದ್ದಲ್ಲ.
ಹೇಗೆ ಹೇಳಲೆನ್ನುವುದೇ ತಿಳಿಯುತ್ತಿಲ್ಲ” ಎಂದೆ.

ಏನು ಹೊಳೆಯಿತೋ ಕವಿಗೆ
ಕಣ್ಣುಹೊಡೆದು ನಕ್ಕರು:
ತಿವಿಯುವಂತೆ ನಕ್ಕು ನೋಡಿ ‘ರಸಿಕರಪ್ಪಾ’ ಎಂದರು
“ಹೇಳಿ ಯಾಕೆ ಸಂಕೋಚ?
ಇಂಥದೆಲ್ಲ ಇದ್ದದ್ದೇ
ಋಷಿಗಳೇನು ನಾವು ನೀವು ?
ಕೆರೆಗೆ ಅವರೂ ಬಿದ್ದದ್ದೇ !
ಉಪ್ಪು ಕಾರ ತಿನ್ನುವಂಥ ದೇಹ ತಾನೆ ನಮ್ಮದೂ ?
ನನಗೂ ಹಿಂದೆ ಬಳ್ಳಿಯೊಂದು ಕಾಲ್ಕಟ್ಟಿದ್ದುಂಟು
ಹೂ ಬಿಡಿಸಲು ಕೆರೆಗಿಳಿದರೆ
ಮಂಡಿತನಕ ಕಾಲು ಹೂತು ಒದ್ದಾಡಿದ್ದುಂಟು!
ಹೇಗೋ ಬಳ್ಳಿ ಕಳಚಿಕೊಂಡೆ
ಕಾಲು ಮೇಲೆ ಎಳೆದುಕೊಂಡೆ
ಮನ್ಮಥನಿಗೆ ಜಯವಾಗಲಿ, ಬದುಕಿಕೊಂಡೆ!” ಎಂದರು

ಕವಿಯ ಮಾತು ಕೇಳಿ ನನಗೆ
ನಗು ಉಕ್ಕಿತು ಒಳಗೆ
“ಅಯ್ಯೋ ಹುಚ್ಚು ಬ್ರಾಹ್ಮಣ !
ನಿಮ್ಮ ಥರದ್ದಲ್ಲ ನಂದು, ಎಂಥದೋ ಪುರಾಣ,
ಬಲು ವಿಚಿತ್ರ ಸಂಗತಿ.
ಕೇಳಿದವರು ನಂಬಲೂ
ಶಂಕೆ ಪಡುವ ಸಂಗತಿ.
ಈಚೆಗೆರಡು ತಿಂಗಳಿಂದ
ಎಂಟು ಹತ್ತು ದಿನಕ್ಕೊಮ್ಮೆ
ಭೂತವೊಂದು ಬರುತ್ತಿದೆ
ಈ ರೂಮಿಗೆ ಗೊತ್ತೆ ?”
ನೋಡಿದೆ ಕವಿಯತ್ತ.

ಗಾಬರಿಯಾದರು ಕವಿ
ದಿಟ್ಟಸಿ ನೋಡಿದರು
“ಏನು ನೀವು ಹೇಳೋದು!
ಇದು ಕವಿತೆಗೆ ಸೇರೋದು
ಏನೋ ನೋಡಿ ಭೂತ ಅಂತ
ಗಾಬರಿಗೊಂಡಿಲ್ಲ ತಾನೆ ?
ಫ್ಯಾಂಟಸಿ ಕಥೆ ಏನನ್ನೋ ಬರೆಯುವ ಪ್ಲಾನಿಲ್ಲ ತಾನೆ ?
ಪಿತ್ಥ ಗಿತ್ಥ ಇದ್ದೀತು
ಜ್ವರದ ಸನ್ನಿ ಇದ್ದೀತು
ಬೇಗ ತಾಪ ಆರೀತು ಹೆದರಬೇಡಿ” ಎಂದರು
ಕೈಯ ಮುಟ್ಟಿ ಹಣೆಯ ಮುಟ್ಟಿ
ಖಾತ್ರಿ ಮಾಡಿಕೊಂಡರು
ಶಂಕೆ, ಆತಂಕ ಅವರ ಕಣ್ಣಿನಲ್ಲಿ ಹೊಳೆಯುತ್ತಿತ್ತು
ಕವಿತೆ ಬರೆದ ಅಭಯಹಸ್ತ
ನನ್ನ ಬೆನ್ನ ಸವರುತ್ತಿತ್ತು.

“ನಿಮ್ಮ ಆಣೆ, ನನ್ನ ಆಣೆ ಕವಿತೆಯಾಣೆ” ಎಂದೆ.
“ಮಕ್ಕೀ ಕಾ ಮಕ್ಕಿ ಘಟನೆ ನುಡಿದೆ ನಿಮ್ಮ ಮುಂದೆ
ನಿಜವಾಗಿಯೂ ಭೂತ ಇದೆ,
ನಾನೇ ಖುದ್ದು ನೋಡಿರುವೆ,
ರೂಬು ರೂಬು ಕೂತು ಎಷ್ಟೋ ಮಾತನ್ನಾಡಿರುವೆ
ಕಾಳರಾತ್ರಿ ಗಾಳಿಯೇರಿ ಭಗ್ಗನೆ ನುಗ್ಗುತ್ತದೆ
ನೀವು ಕೂತ ಕುರ್ಚಿಯಲ್ಲಿ ಧಿಮ್ಮನೆ ಕೂರುತ್ತದೆ
ಭಾಷೆ, ತರ್ಕ, ಮುಂಡೇದಕ್ಕೆ ಕಾವ್ಯ ಕೂಡ ಗೊತ್ತಿದೆ
ಕಂಡ ದಿವಸದಿಂದ ನನ್ನ ನೆಮ್ಮದಿಯೇ ಸತ್ತಿದೆ”

“ಹೇಗಿದೆ ?” ಎಂದರು ಕವಿ.
“ಅದೆ ವಿಚಿತ್ರ ನೋಡಿ
ನನ್ನನೆ ಕಡೆದಿಟ್ಟಂತಿದೆ ಎಲ್ಲ ಅಳತೆ ಮಾಡಿ.
ದೇಹವಷ್ಟೇ ಅಲ್ಲ,
ನಿಲುವು ಮಾತು ಧಾಟಿಯನ್ನೂ ಕದ್ದಂತಿದೆ ಕಳ್ಳ.
ಮನಸಿನಾಳದಲ್ಲಿ ಮಿಂಚಿ ತಳಕಿಳಿದದ್ದನ್ನೂ
ಗಾಳ ಹಾಕಿ ಎತ್ತುತ್ತದೆ
ಉರಿ ಉರಿಯುವ ಕಣ್ಣು!”

ಇರಲಿ ಬಿಡಿ, ಚಿಂತೆ ಬೇಡ
ಸ್ವಲ್ಪ ದಿವಸ ಬಿಡೋಣ,
ಕೆಟ್ಟದ್ದವಂತೂ ಇರಲಾರದು
ಅದರ ಆಟ ನೋಡೋಣ.
ಮೈ ಮುಟ್ಟುವುದಿಲ್ಲವಲ್ಲ ಬೇರೇನೇ ಆದರೂ
ಬರುತ್ತೇನೆ ಮತ್ತೆ ಎಂದು
ನಾಡಿಗ ಮೇಲೆದ್ದರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಡವೆ
Next post ಕಳ್ಳ ನೋಟ ಬೀರಿ

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

cheap jordans|wholesale air max|wholesale jordans|wholesale jewelry|wholesale jerseys