ಬಿಡುಗಡೆ

ವಾಸ-ನಾಲ್ಕು ಪುಟಗಳ ಮಧ್ಯೆ
ಭಾಷೆ-ವ್ಯಾಕರಣ ಸೂತ್ರಗಳ ಮಧ್ಯೆ
ಗಡಿ ಮಡಿಗಳ ಇಕ್ಕಟ್ಟಿನೊಳಗೆ ಹೀಗೆ
ಬಿಕ್ಕಟ್ಟಿಗೆ ಸಿಕ್ಕು ಬಾಳಿದರೂ
ತರ್ಕದ ತಲೆಮೆಟ್ಟಿ ಹಾಡುತ್ತದೆ
ಕಟ್ಟು ಮೀರಿ ಹುಟ್ಟುವ ಪದ್ಯದ ಸತ್ಯ.

ಅದರ ದನಿ – ಬಳೆ ನೂಪುರ ಕಾಲುಂಗರ,
ಕಳೆ-ಎಳೆ ಹುಡುಗನ ಮುಖದಂಗಳ;
ಒಡಲು ಹನಿಯಾದರೂ ಜಿಗಿಯುತ್ತದೆ
ಮನೆ ಮಠ ನೆಲ ಬಾನು ತಾರೆಯ,
ಮಂಗಳ ತಿಂಗಳ ಮೇರಯ.

ಎಂದೇ ಸೆಣಸುವ ಕಣದಲ್ಲಿ
ಇಂದಿಗೂ ಸಾಕ್ರಟೀಸ್ ಇದ್ದೇ ಇದ್ದಾನೆ;
ಹಳೆ ವೇಶದ ಕಟ್ಟೊಡೆದು
ಉರಿ ಉರಿ ಹಿಪ್ಪಿ ಹುಟ್ಟುತ್ತಾನೆ;
ಪ್ರಸ್ತುತ ಪ್ರಿಯಗಳ ದಾಳಿಯನ್ನು ತಡೆದು
ಸೋಗಿನ ಸತ್ಯಗಳ ಸೌಧವನ್ನು ಒಡೆದು
ಬಯಲ ಬಿಡುಗಡೆಗೆ ತುಯ್ಯುತ್ತಾನೆ,
ಒಡಲ ಗುಡುಗುಡಿ ಹೊತ್ತಿ
ನೆತ್ತಿಯ ಆಕಾಶಕ್ಕೆತ್ತಿ
ಸದಾ ಪಾರಿಜಾತಕ್ಕೆ ಸುಯ್ಯುತ್ತಾನೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಸಾರ
Next post ನೀ ಬಾರದೇ

ಸಣ್ಣ ಕತೆ

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಸಂಬಂಧ

    ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…