Home / ಕವನ / ಕವಿತೆ / ಡಾನ್‌ನ ಕಗ್ಗೊಲೆ

ಡಾನ್‌ನ ಕಗ್ಗೊಲೆ

 

ಜನವರಿ ಅಥವಾ ಮೇ ತಿಂಗಳಿನ ಮಧ್ಯಭಾಗದಲ್ಲಿ
ಆತ ನಮ್ಮ ಸಾರಾಯಿ ಗಡಂಗಿಗೆ ವೆಂಡರ್ ಆಗಿ ಬಂದ.
ಅಷ್ಟೊತ್ತಿಗಾಗಲೇ ಛೋಟ ಡಾನ್‌ಗಳೆನ್ನಿಸಿಕೊಂಡವರ
ತಲೆ ತೆಗೆದು ಬಂದಿದ್ದ.
ಅವನ ಮುಖದ ಮೇಲೆ ನೊಣಗಳು ಹಾಯುತ್ತಿರಲಿಲ್ಲ;
ಆದರೆ ಹೂ‌ಎಲೆ ತೊಟ್ಟುಗಳು ತೇಲಿತೇಲಿ ಬೀಳುತ್ತಿದ್ದವು.

ಅವನು ನಾಪತ್ತೆಯಾದ ಆ ದಿನಗಳ ಬಗ್ಗೆ ಖಚಿತವಾಗಿ ಹೇಳಲಾಗದು.

ಅವನು ತಿರುಗಿ ಬಂದಾಗ ದಿಕ್ಕಿಲ್ಲದ, ನಿರ್ಗತಿಕ ಮನುಷ್ಯನಂತೆ
ದಟ್ಟ ದಾಡಿ ಬೆಳೆಸಿಕೊಂಡಿದ್ದ, ಕುಂಟುತ್ತಿದ್ದ.
ದೈಹಿಕವಾಗಿ, ಮಾನಸಿಕವಾಗಿ ವಿರೋಚಿತ
ಸೋಲು ಕಂಡಿದ್ದನೆಂದೇ ಹೇಳಬಹುದು.

ಸಾರಾಯಿ ಗಡಂಗು ತೆರೆಯುತ್ತೇನೆಂದೋಗಿ
ಬಾರ್ ಮಾಲೀಕನಿಂದ ಭೀಕರ ಹಲ್ಲೆಗೊಳಗಾದ,
ಸತ್ತು ಹೋಗಿದ್ದನಾದರೂ ಬದುಕುಳಿದಿದ್ದ.

ಈ ಸಲ ಕಾಣೆಯಾದವನು ಬಹಳ ಬೇಗ ತನ್ನ ಕಡೆಯ ದಿನವನ್ನು
ಆತುರಾತುರವಾಗಿ ಪ್ರಕಟಿಸಿಬಿಟ್ಟಿದ್ದ.
ಕೆಲಸದ ಆಮಿಷ ಒಡ್ಡಿ, ಪರಸ್ಥಳವೊಂದಕ್ಕೆ ಕರೆದೊಯ್ದ ಹಳೆದ್ವೇಷಿಗಳು
ಅವನ ಪಾದಗಳನ್ನು ಕತ್ತರಿಸಿ, ನೇಣು ಹಾಕಿದ್ದರು.

ಹೀಗೆ ಭೀಕರ ಕಗ್ಗೊಲೆಯಲ್ಲಿ ಒಂದು ದಿನ ಅಂತ್ಯಗೊಂಡಿದ್ದ;
ಅವನು ಇದ್ದನೆಂಬುದಕ್ಕೆ ನನ್ನ ಬಳಿ ಯಾವುದೇ ಪುರಾವೆ ಇಲ್ಲ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...