Home / ಕವನ / ಕವಿತೆ / ಮನದೊಳಗಣ…

ಮನದೊಳಗಣ…

ಮನದೊಳಗಣ
ಮನೆಯ ಕಟ್ಟಿದೆ
ಹೇ ದೇವ ಹೋ ದೇವ
ಎಂಥ ಚೆಂದವೋ

ಪಂಚ ತತ್ವವೆಂಬ
ಇಟ್ಟಿಗೆಯನಿಟ್ಟು
ಗೋಡೆಗಳ ಕಟ್ಟಿ ಭದ್ರಪಡಿಸಿ
ಮುತ್ತುಗಳ ಸೇರಿಸಿ ಒಳಗಣ
ನೂಲುಗಳ ಸುತ್ತಿಸಿ ಒಂಬತ್ತು
ಗೂಡುಗಳನಿರಿಸಿ ಉಸಿರಾಗಿಸಿದೆ
ಧಮನಿಗಳಲ್ಲಿ ಎಂಥ ಚೆಂದವೋ
ಹೇ ದೇವ ಹೇ ದೇವ

ಸತ್ಯಧರ್ಮವೆಂಬ
ಜ್ಯೋತಿಯನ್ನಿರಿಸಿ ಬಾಳಿಗೆ
ತುಲಾಭಾರವೆಂಬ ತೂಕವನ್ನಿರಿಸಿ
ಗೊಂಬೆಯಾಗಿಸಿದೆ
ಎಂಥ ಚೆಂದವೋ
ಹೇ ದೇವ ಹೇ ದೇವ
ಮೂರೇ ದಿನದ ಜೋಗುಳದಲಿ
ನೋವುನಲಿವುಗಳ
ತೊಟ್ಟಿಲ ಕಟ್ಟಿ ತೂಗಿಸಿ
ಆಟವಾಡಿಸುತಿಹೆ
ಹೇ ದೇವ ಹೇ ದೇವ

ಬಣ್ಣಿಸಲಸದಳವೂ
ಹೇಗಾದರೂ ಸರಿಯೇ
ನೀನೇ ಜೀವನವೋ ನಮ್ಮ ಬಾಳಿಗೆ.
ಶಿವನು ಆಡಿಸಿದ ಡಮರುಗ
ಢಂ ಢಂ ಢಂ ಢಮರುಗ.
ನರ್ತಿಸಿತು ಭಾವತರಂಗ
ರುದ್ರರೂಪ ತಾಳ ಹಿಮ್ಮೇಳ
ಜೀವ ನರನಾಡಿಗಳು
ಓಂಕಾರ ಹೂಂಕಾರ
ನಾದರೂಪ ಜಗವ
ಆವರಿಸಿತು
ಮನನ ತನನ ತೋಂ ತನನ ||

ಧರೆಗೆ ಇಳಿದ
ಜಟಾಧಾರಿ ಆನಂದ
ಮಹದಾನಂದ ತ್ರಿನೇತ್ರಧಾರಿ
ತ್ರಿಪುರಾರಿ ವಿಶ್ವರೂಪಧಾರಿ ||

ಗಜಚರ್ಮಾಂಬರಧಾರಿ
ಸಚ್ಚಿದಾನಂದ ಸ್ವರೂಪ
ಮಹದೇವ ಮೂರುವರ
ಕೊಟ್ಟು ಸಲಹೆನ್ನ ಮುಕ್ಕಣ್ಣ ||

ಬಾರನ್ನ ಬಾಳು ಬಂಗಾರವಾಗಿಸು
ಶಂಭೋ ಲಿಂಗೈಕ್ಯ ಹಂಸರೂಪ
ಎನ್ನಯ್ಯ ರಕ್ಷಿಸೈ ಮುದದಿ
ನೂರು ವರುಷದಾ ಹಾದಿಯಲಿ ||

ಸುಗಮವಾಗಿಸೋ ದೇವ
ನಾರಾಯಣಾ ಆತ್ಮಜನೆ
ಶಿವಲಿಂಗ ಎನ್ನ ಅಂತರಂಗದಲಿ ನಿಲ್ಲಯ್ಯ
ಬಾರಯ್ಯ ಬಾರೋ ಎನ್ನಯ್ಯ ||
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...