Home / ಕವನ / ಕವಿತೆ / ಮನದೊಳಗಣ…

ಮನದೊಳಗಣ…

ಮನದೊಳಗಣ
ಮನೆಯ ಕಟ್ಟಿದೆ
ಹೇ ದೇವ ಹೋ ದೇವ
ಎಂಥ ಚೆಂದವೋ

ಪಂಚ ತತ್ವವೆಂಬ
ಇಟ್ಟಿಗೆಯನಿಟ್ಟು
ಗೋಡೆಗಳ ಕಟ್ಟಿ ಭದ್ರಪಡಿಸಿ
ಮುತ್ತುಗಳ ಸೇರಿಸಿ ಒಳಗಣ
ನೂಲುಗಳ ಸುತ್ತಿಸಿ ಒಂಬತ್ತು
ಗೂಡುಗಳನಿರಿಸಿ ಉಸಿರಾಗಿಸಿದೆ
ಧಮನಿಗಳಲ್ಲಿ ಎಂಥ ಚೆಂದವೋ
ಹೇ ದೇವ ಹೇ ದೇವ

ಸತ್ಯಧರ್ಮವೆಂಬ
ಜ್ಯೋತಿಯನ್ನಿರಿಸಿ ಬಾಳಿಗೆ
ತುಲಾಭಾರವೆಂಬ ತೂಕವನ್ನಿರಿಸಿ
ಗೊಂಬೆಯಾಗಿಸಿದೆ
ಎಂಥ ಚೆಂದವೋ
ಹೇ ದೇವ ಹೇ ದೇವ
ಮೂರೇ ದಿನದ ಜೋಗುಳದಲಿ
ನೋವುನಲಿವುಗಳ
ತೊಟ್ಟಿಲ ಕಟ್ಟಿ ತೂಗಿಸಿ
ಆಟವಾಡಿಸುತಿಹೆ
ಹೇ ದೇವ ಹೇ ದೇವ

ಬಣ್ಣಿಸಲಸದಳವೂ
ಹೇಗಾದರೂ ಸರಿಯೇ
ನೀನೇ ಜೀವನವೋ ನಮ್ಮ ಬಾಳಿಗೆ.
ಶಿವನು ಆಡಿಸಿದ ಡಮರುಗ
ಢಂ ಢಂ ಢಂ ಢಮರುಗ.
ನರ್ತಿಸಿತು ಭಾವತರಂಗ
ರುದ್ರರೂಪ ತಾಳ ಹಿಮ್ಮೇಳ
ಜೀವ ನರನಾಡಿಗಳು
ಓಂಕಾರ ಹೂಂಕಾರ
ನಾದರೂಪ ಜಗವ
ಆವರಿಸಿತು
ಮನನ ತನನ ತೋಂ ತನನ ||

ಧರೆಗೆ ಇಳಿದ
ಜಟಾಧಾರಿ ಆನಂದ
ಮಹದಾನಂದ ತ್ರಿನೇತ್ರಧಾರಿ
ತ್ರಿಪುರಾರಿ ವಿಶ್ವರೂಪಧಾರಿ ||

ಗಜಚರ್ಮಾಂಬರಧಾರಿ
ಸಚ್ಚಿದಾನಂದ ಸ್ವರೂಪ
ಮಹದೇವ ಮೂರುವರ
ಕೊಟ್ಟು ಸಲಹೆನ್ನ ಮುಕ್ಕಣ್ಣ ||

ಬಾರನ್ನ ಬಾಳು ಬಂಗಾರವಾಗಿಸು
ಶಂಭೋ ಲಿಂಗೈಕ್ಯ ಹಂಸರೂಪ
ಎನ್ನಯ್ಯ ರಕ್ಷಿಸೈ ಮುದದಿ
ನೂರು ವರುಷದಾ ಹಾದಿಯಲಿ ||

ಸುಗಮವಾಗಿಸೋ ದೇವ
ನಾರಾಯಣಾ ಆತ್ಮಜನೆ
ಶಿವಲಿಂಗ ಎನ್ನ ಅಂತರಂಗದಲಿ ನಿಲ್ಲಯ್ಯ
ಬಾರಯ್ಯ ಬಾರೋ ಎನ್ನಯ್ಯ ||
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...