ನನ್ನ ಎದೆಯ ಗೂಡಲ್ಲಿ

ನನ್ನ ಎದೆಯ ಗೂಡಲ್ಲಿ
ಮಾತನಿರಿಸಿದ ಪ್ರೇಮಿ ನೀನು
ಪ್ರೀತಿಸುವೆ ಪ್ರೇಮಿಸುವೆ
ಎಂಬ ಮಾತಿನೆಳೆಯಲಿ
ಸೆರೆ ಸಿಕ್ಕ ರಾಧೆ ನಾನು ||ಪ್ರೀ||

ವಿರಹ ವೇದನೆಯಲಿ
ಹಗಲಿರುಳು ಕಾದಿರುವೆ
ನಿನಗಾಗಿ ನಾನು ಎನ್ನ ಮನವ
ತಿಳಿಯದೇ ಹೋದೆ ನೀನು ||ಪ್ರೀ||

ಬರಿದಾಗುವುದು ಬೃಂದಾವನ
ಕೊಳಲನಾದ ವಿಲ್ಲದೇ ||
ಹರಿಯುತಿಹಳು ಯಮುನೆ
ಕೆಳೆಯ ಭಾವವಿಲ್ಲದೆ ||ಪ್ರೀ||

ಭಾವನೆಗಳ ಒಲುಮೆಯಲಿ
ಹುಡುಗಿ ಕನ್ನಡಿಯಾದೆ ||
ಕಣ್ಣರೆಪ್ಪೆ ಮುಚ್ಚಿರಲು
ಮಾಧವ ನಿನ್ನ ಕಂಡೆ ||ಪ್ರೀ||

ಎಲ್ಲಿರುವೆ ಹೇಗಿರುವೆ
ಯಾರ ಕೂಗಿಗೆ ಮೊರೆ
ಹೋಗಿರುವೆ ಮುಕುಂದನೇ
ಗೊಂಬೆಯಾಟವಲ್ಲ ತಿಳಿ ನೀನು ಸುಮ್ಮನೇ ||ಪ್ರೀ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯುದ್ಧಕ್ಕೆ ಹೋದ ಮಗನನ್ನು ಕುರಿತು
Next post ಒಬ್ಬಂಟಿ

ಸಣ್ಣ ಕತೆ

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…