ನೀ ಬರುವ ದಾರಿಯಲಿ

ನೀ ಬರುವ ದಾರಿಯಲಿ
ನಿನ್ನ ನೆನಪುಗಳೇ
ಸುಳಿದಾಡೋ ಗಾಳಿಯಲಿ
ತಂಪೆರೆವ ಹನಿಗಳೇ ||

ಮನದ ಕೂಗು ಕೇಳದೆ
ಮನದಿಂದ ಹಾಡುವ
ತುಡಿತದ ನೋವುಗಳೇ
ಎನ್ನ ಕಾಡುವ ದನಿಗಳೇ ||

ಕಲ್ಲು ಮನಸ್ಸು ನಿನ್ನದು
ಕರಗದು ನಿನ್ನ ಮನವು ಮರುಗದು
ನಾ ನಿನಗೆ ಮನವ ನೀಡಿ
ಸೋತು ಹೋದೆ ನಾನೂ ||

ಸರಸಿಜನಾಭನೆ ಕೇಳು
ನೀನಿಲ್ಲದೆ ನಾ ಬಾಳುವೆ
ಛಲ ಹಿಡಿದು ಬದುಕುವೆ
ರುಕ್ಕಿಣಿ ಪತಿಯೇ ||

ರಾಧೆಯು ನಾನು ನನ್ನ
ಮಾಧವ ನೀನು
ಎಲ್ಲಿರಲೇನು ನಾ ನಿನ್ನ
ಭಕ್ತಿ ಚೈತನ್ಯದ ಕುಸುಮವೂ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೆವ್ವದ ಕೋರ್ಟಿನಲ್ಲಿ
Next post ಬಹಳ ಕಂಡಿದ್ದೇನೆ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಕನಸು ದಿಟವಾಯಿತು

    ಪ್ರಕರಣ ೨ ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ ಕನಸಿನ ಸಮಾಚಾರವನ್ನು ತಿಳಿಸಿದನು. ಆಕೆ- ಸರಿ, ಇನ್ನು ಈ ಹುಚ್ಚೊಂದು ನಿಮಗೆ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…