ಮಲ್ಲಿಗೆಯೆ ಮುಡಿಯಬಾರದೇಕೆ

ಮಲ್ಲಿಗೆಯೆ
ಮುಡಿಯಬಾರದೇಕೆ
ಮುಡಿದರೆ ನಿನ್ನ ಮಡಿವಂತಿಕೆಯೆ ||

ಬಾಲೆಯಾದೆನ್ನ ಅಪ್ಪಿ
ಮುತ್ತಿಟ್ಟೆ ಒಲವು
ತೋರಿದೆ ಯೌವನಕೆ ||

ಮನವ ಸೆಳೆದು
ಮುಡಿಯ ನೇರಿ ನಗಿಸಿ
ಒಲ್ಲೆ ಎಂದು ಹೇಳಲು ನೀನು ||

ನೊಂದು ಬೆಂದ
ಬೈರಾಗಿ ನಾ ಅರಿಯಲಿಲ್ಲ
ಮುಗುದೆ ಜೀವನವನು ||

ಜನುಮಕೊಂದು
ಮದುವೆ ಎಂದು
ನಲಿದು ಮಣಿಸಿದೆ ನೀನು ||

ದೇವನೊಲಿದ ಮನೆ
ಬೆಳಕು ಹರುಷ
ತಂದಿತೆಂದು ನಂಬಿದೆ ||

ವಿಧಿಯಾಟವಾಡಿ
ನೀ ವಿಧವೆ ಎಂದಾಗ
ನಿನ್ನ ಮುಡಿದರೆ ಮಡಿವಂತೆಕೆಯೆ ||

ಅತ್ತಿತ್ತ ಅವರಿವರಾಡಿದ
ಮಾತು ಚುಚ್ಚಿ ಕಾಡಿತು.
ಬರಿದಾಯ್ತು ಮನಸ್ಸು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೆನಪು
Next post ಧೂಮಪಾನವೇಕೆ ಗೆಳತಿ

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ರಾಜಕೀಯ ಮುಖಂಡರು

    ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…