ಮಲ್ಲಿಗೆಯೆ ಮುಡಿಯಬಾರದೇಕೆ

ಮಲ್ಲಿಗೆಯೆ
ಮುಡಿಯಬಾರದೇಕೆ
ಮುಡಿದರೆ ನಿನ್ನ ಮಡಿವಂತಿಕೆಯೆ ||

ಬಾಲೆಯಾದೆನ್ನ ಅಪ್ಪಿ
ಮುತ್ತಿಟ್ಟೆ ಒಲವು
ತೋರಿದೆ ಯೌವನಕೆ ||

ಮನವ ಸೆಳೆದು
ಮುಡಿಯ ನೇರಿ ನಗಿಸಿ
ಒಲ್ಲೆ ಎಂದು ಹೇಳಲು ನೀನು ||

ನೊಂದು ಬೆಂದ
ಬೈರಾಗಿ ನಾ ಅರಿಯಲಿಲ್ಲ
ಮುಗುದೆ ಜೀವನವನು ||

ಜನುಮಕೊಂದು
ಮದುವೆ ಎಂದು
ನಲಿದು ಮಣಿಸಿದೆ ನೀನು ||

ದೇವನೊಲಿದ ಮನೆ
ಬೆಳಕು ಹರುಷ
ತಂದಿತೆಂದು ನಂಬಿದೆ ||

ವಿಧಿಯಾಟವಾಡಿ
ನೀ ವಿಧವೆ ಎಂದಾಗ
ನಿನ್ನ ಮುಡಿದರೆ ಮಡಿವಂತೆಕೆಯೆ ||

ಅತ್ತಿತ್ತ ಅವರಿವರಾಡಿದ
ಮಾತು ಚುಚ್ಚಿ ಕಾಡಿತು.
ಬರಿದಾಯ್ತು ಮನಸ್ಸು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೆನಪು
Next post ಧೂಮಪಾನವೇಕೆ ಗೆಳತಿ

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…