ಕಳೆದವು ಹತ್ತು ದಿನ

ಕಳೆದವು ಹತ್ತು ದಿನ
ನಿಮ್ಮ ಕಾಯುತಲಿ ಎನ್ನರಸ
ಬಾಗಿಲ ಬಳಿಯಲಿ ನಿಂತೇ
ನಿಮ್ಮಯ ಬರವನು ನೋಡುತ್ತ ||

ಬರುವೆನೆಂದು ಹೇಳಿ ಹೋದ ನಿಮ್ಮನು
ಮರಳಿ ಬರುವಿರೆಂದು ಕಾದೆನು
ಬರುವ ಅವರಿವರ ಕಣ್ಣಾಲಿಸಿ ನೋಡಿದೆ
ಪರಿತಪಿಸಿದೆ ||

ಮೊದಲ ರಾತ್ರಿಯ ನಗುಮೊಗದ
ಚಂದದಿ ಬರಸೆಳೆದು ಮುತ್ತನಿತ್ತಿರಿ
ಆ ದಿನ! ಮೃದುವಚನವಿತ್ತು ಹೋದಿರಿ ಎಲ್ಲಿಗೆ ||

ಇರುವಿರಿ ಹೇಗೆ ಇರುವಿರಿ ಪ್ರೀತಿಯಲಿ
ಎನ್ನರಸಿ ನಿಮ್ಮದೇ ಚಿಂತೆಯು ದಿನದಿನವು
ಕುಳಿತರೂ ನಿಂತರು ಮಲಗಿದರು ಕಾಡುತಿದೆ
ನಿಮ್ಮದೇ ನೆನಪು ||

ಬಣ್ಣದ ಓಕುಳಿ ಬರಿದೆ ಚೆಲ್ಲಿದಿರಿ
ಬರಿದಾಗಿಸದಿರಿ ನನ್ನಾಸೆ ಕರಿಮೋಡಗಳಲಿ
ಮಿಂಚು ಹೊಳೆದಂತೆ ಕಾಡುತಿಹುದು ನಿಮ್ಮ ನೆನಪು ||

ನಾನು ನಿಮ್ಮನ್ನು ಮರೆತೆ ಎನ್ನದಿರಿ
ಮರೆಯಲು ಬಿಡುವೆನೇ ನಾ ನಿಮ್ಮ |
ಸುಖಃ ನಿಮ್ಮ ಒಲುಮೆಯಲಿ ನಾನಿರಲು ||

ಬಯಲು ಹಸಿರಿನಲಿ ಬೀಗಲೇ ಇಲ್ಲ
ತನಿ ಬೆಳದಿಂಗಳು ಬರಲಿಲ್ಲ
ಉಕ್ಕಲಿಲ್ಲ ಕಡಲ ಅಲೆಗಳು
ಹಕ್ಕಿಗಳ ಚಿಲಿಪಿಲಿ ದನಿಯಿಲ್ಲಾ ||

ನಂಬಿಹೆನು ನಿಮ್ಮ ಬರುವಿರಿ ಎಂದು
ಸುಖಃ ಕದವ ತೆರೆದು ಬೆಳಕಾಗಿ ಬರಲು
ನೀವು! ಕಾದಿರುವೆನು ಹಗಲು ಇರುಳು ||
*****

One thought on “0

  1. Instead of waiting to come,keeping in heart is better because when you kept in heart there is no chance of escaping,and waiting for escaped😛..nimm ella kavite galanna odutta iruve,nimm anubavagalu chanda,heege bareyuttiri preeti batti hoda manasugalali preeti tumbuttiri

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದನಿಗಳು
Next post ಗೊರಕೆ ಸಾಕು

ಸಣ್ಣ ಕತೆ

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…