Home / ಕವನ / ಕವಿತೆ / ಏನು ಪಾಡಲಿ

ಏನು ಪಾಡಲಿ

ಏನ ಪಾಡಲಿ ನಿನ್ನ ಆಮೋದಕಿಂದು
ನೀನಿತ್ತ ಪ್ರೇರಣೆಯು ನಿನ್ನದೀ ಮುರುಳಿ
ಘನ ಪದಕೆ ಪದವಿಟ್ಟು ಧನಿ ಧನಿಯ ಧಾಟಿಯಲಿ
ಘನವರಣ ಹನಿರಸದ ಬಲು ಸಿವುರಿನ
ಎಣಿಸಿಟ್ಟ ಪ್ರಾಸಗಳ ಜೋಡಿಸಿದ ಮೇಣಗಳ
ಕಣಕಣನೆ ದನಿಗೊಡುವ ಗಜ ಗಬ್ಬುಬೇಕೆ

ಕಿರಿ ಪಿರಿಯ ನವನುಡಿಯ ಹೊಳೆ ಹೊನ್ನ ಸರಿಗೆಯಲಿ
ಸರಿದಿಟ್ಟು ತರತರದೈಸಿರಿರಾಗ ವರಸೆಯಲಿ
ಮರಮಠಳಿ ಶೃತಿನೋಡಿ ಹೊಂಗಳಲ ಪ್ರಾಣಗಳ
ಬೆರಳಲ್ಲಿ ನುಡಿಸುತ್ತ ಮನ ಮರೆಸಲೊ

ಹೊಸಪದವ ಹಳೆಪದವ ಹೊಸದಿಟ್ಟು ಹೊಸಪರಿಯ
ಹೊಸಧಾಟಿ ಹೊಸಭಾವ ಪೊಸೆವೊಂದು ಲಾವಣಿಯ
ನಸುನಗುತ ರಸವರಿದು ನೀ ಮೋದ ಪಡುವಂಥ
ಮಿಸುನಿಯಾ ಸ್ಪರ್ಶದಾ ಕೃತಿಯೊಂದು ಬೇಕೋ

ಚಳವಳಿಯ ಭಾವಕಿವೆ ಕಿಡಿ ಇಡುವ ಪದಗಳಿವು
ತಿಳವನ್ಹಿ ಬಿಳಿಜೋತಿಗಿದೆ ಭಕುತ ಮನಧವಿಸು
ಹೊಳೆಯಾಯ್ತು ಗುಪ್ತಾಗ್ನಿ ಉಕ್ಕುತಿದೆ ಜ್ವಾಲೆಯಿದು
ತಿಳಿಹು ಮನದಿಷ್ಟಾರ್ಥ ಪಾಡಲೇನ

ಗುಡ್ಡ ಕಾಡಿನ ರೂಪು ಅಡ್ಡವಿಸಿ ವರಣಿಸಲೊ
ಗುಡ್ಡದಿಂ ಧಡಧಡನೆ ಹಾರ್ವುದರ ಶೃತಿಗೆ?
ಹೆಡ್ಡರೆಲ್ಲರು ಕೂಡಿ ಧೂಳ ರೌರವದಲ್ಲಿ
ಅಡ್ಡಾಡಿ ಮೈಮರವ ಪರಿಯ ಬಣ್ಣಿಸಲೊ?

ನಗರಗಳು ಬೆಳೆದಳಿದು ಹನುಮ ಭೀಮರು ಎದ್ದು
ಜಗವ ತಲ್ಲಣಗೊಳಿಸೆ! ಕಂತಿ ಪಂಪರ ಕವಿತೆ!
ಚಿಗಿದು ಮೊಳಗಲು! ಇಳೆಯು ನಲಿದೊಲಿಯು ತಿರುವಾಗ!
ಜಗದಲ್ಲಿ ಬೆಳದಿಳಿದ ಕಥೆಗಳವು ಬೇಕೆ?

ಆದಿ ಕವಿಯಿಂದೀಚೆ ಪದಶಿಲ್ಪಿಗಳನೆಲ್ಲ
ಸೋದರರ! ಕೊಳಲ ಭಾಂಧವರನ್ನು ಮಾಯೆಯಲಿ
ಓದದರ ಮುಂದೆತ್ತಿ ಸುಳಿದಾಡಿಸುತಲಿನ್ನು
ಹೋದ ವೈಭವವನ್ನು ಕಾಣಿಸಲೊ ಕನಸಲ್ಲಿ?

ಇದ್ದಾಗ ಕರೆ ಎನದೆ ಕೂಡೆನದೆ ಕೊಳ್ಳೆನದೆ
ಹೊಯ್ದೆಸೆದ ಕಲ್ಲಲ್ಲಿ ಹೂತಿಟ್ಟ ಭಕ್ತನನು
ಮುದ್ದಿಟ್ಟು! ಕಡೆಕಡೆಗೆ ಪಾಡುವರು ರಗಳೆಗಳ!
ಸುಯ್ದೆದ್ದು ಮನವದನು ಕೇಳುತಿದೆ ಕೇಳೈ!

ಗೆಳೆಯರಾಗುಂಪಿನದು ಮಧುಯುಗದ! ಮುಧುಗಾನ
ಮೋಳಗುತಿದೆ ಮಹಿಷೂರ ಹೊಂಗಳಲ! ಸವಿಗಾನ
ಬಲು ರವದ ಹೆದ್ದುಂಬೆ! ಹೊಯ್ಸಳನ ಹೆಗ್ಗಾನ
ನಿಲದಿನ್ನು ಪೇಳೈ ಪಾಲಿಸಪ್ಪಣೆಯ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...