Home / ಕವನ / ಕವಿತೆ / ಏನು ಪಾಡಲಿ

ಏನು ಪಾಡಲಿ

ಏನ ಪಾಡಲಿ ನಿನ್ನ ಆಮೋದಕಿಂದು
ನೀನಿತ್ತ ಪ್ರೇರಣೆಯು ನಿನ್ನದೀ ಮುರುಳಿ
ಘನ ಪದಕೆ ಪದವಿಟ್ಟು ಧನಿ ಧನಿಯ ಧಾಟಿಯಲಿ
ಘನವರಣ ಹನಿರಸದ ಬಲು ಸಿವುರಿನ
ಎಣಿಸಿಟ್ಟ ಪ್ರಾಸಗಳ ಜೋಡಿಸಿದ ಮೇಣಗಳ
ಕಣಕಣನೆ ದನಿಗೊಡುವ ಗಜ ಗಬ್ಬುಬೇಕೆ

ಕಿರಿ ಪಿರಿಯ ನವನುಡಿಯ ಹೊಳೆ ಹೊನ್ನ ಸರಿಗೆಯಲಿ
ಸರಿದಿಟ್ಟು ತರತರದೈಸಿರಿರಾಗ ವರಸೆಯಲಿ
ಮರಮಠಳಿ ಶೃತಿನೋಡಿ ಹೊಂಗಳಲ ಪ್ರಾಣಗಳ
ಬೆರಳಲ್ಲಿ ನುಡಿಸುತ್ತ ಮನ ಮರೆಸಲೊ

ಹೊಸಪದವ ಹಳೆಪದವ ಹೊಸದಿಟ್ಟು ಹೊಸಪರಿಯ
ಹೊಸಧಾಟಿ ಹೊಸಭಾವ ಪೊಸೆವೊಂದು ಲಾವಣಿಯ
ನಸುನಗುತ ರಸವರಿದು ನೀ ಮೋದ ಪಡುವಂಥ
ಮಿಸುನಿಯಾ ಸ್ಪರ್ಶದಾ ಕೃತಿಯೊಂದು ಬೇಕೋ

ಚಳವಳಿಯ ಭಾವಕಿವೆ ಕಿಡಿ ಇಡುವ ಪದಗಳಿವು
ತಿಳವನ್ಹಿ ಬಿಳಿಜೋತಿಗಿದೆ ಭಕುತ ಮನಧವಿಸು
ಹೊಳೆಯಾಯ್ತು ಗುಪ್ತಾಗ್ನಿ ಉಕ್ಕುತಿದೆ ಜ್ವಾಲೆಯಿದು
ತಿಳಿಹು ಮನದಿಷ್ಟಾರ್ಥ ಪಾಡಲೇನ

ಗುಡ್ಡ ಕಾಡಿನ ರೂಪು ಅಡ್ಡವಿಸಿ ವರಣಿಸಲೊ
ಗುಡ್ಡದಿಂ ಧಡಧಡನೆ ಹಾರ್ವುದರ ಶೃತಿಗೆ?
ಹೆಡ್ಡರೆಲ್ಲರು ಕೂಡಿ ಧೂಳ ರೌರವದಲ್ಲಿ
ಅಡ್ಡಾಡಿ ಮೈಮರವ ಪರಿಯ ಬಣ್ಣಿಸಲೊ?

ನಗರಗಳು ಬೆಳೆದಳಿದು ಹನುಮ ಭೀಮರು ಎದ್ದು
ಜಗವ ತಲ್ಲಣಗೊಳಿಸೆ! ಕಂತಿ ಪಂಪರ ಕವಿತೆ!
ಚಿಗಿದು ಮೊಳಗಲು! ಇಳೆಯು ನಲಿದೊಲಿಯು ತಿರುವಾಗ!
ಜಗದಲ್ಲಿ ಬೆಳದಿಳಿದ ಕಥೆಗಳವು ಬೇಕೆ?

ಆದಿ ಕವಿಯಿಂದೀಚೆ ಪದಶಿಲ್ಪಿಗಳನೆಲ್ಲ
ಸೋದರರ! ಕೊಳಲ ಭಾಂಧವರನ್ನು ಮಾಯೆಯಲಿ
ಓದದರ ಮುಂದೆತ್ತಿ ಸುಳಿದಾಡಿಸುತಲಿನ್ನು
ಹೋದ ವೈಭವವನ್ನು ಕಾಣಿಸಲೊ ಕನಸಲ್ಲಿ?

ಇದ್ದಾಗ ಕರೆ ಎನದೆ ಕೂಡೆನದೆ ಕೊಳ್ಳೆನದೆ
ಹೊಯ್ದೆಸೆದ ಕಲ್ಲಲ್ಲಿ ಹೂತಿಟ್ಟ ಭಕ್ತನನು
ಮುದ್ದಿಟ್ಟು! ಕಡೆಕಡೆಗೆ ಪಾಡುವರು ರಗಳೆಗಳ!
ಸುಯ್ದೆದ್ದು ಮನವದನು ಕೇಳುತಿದೆ ಕೇಳೈ!

ಗೆಳೆಯರಾಗುಂಪಿನದು ಮಧುಯುಗದ! ಮುಧುಗಾನ
ಮೋಳಗುತಿದೆ ಮಹಿಷೂರ ಹೊಂಗಳಲ! ಸವಿಗಾನ
ಬಲು ರವದ ಹೆದ್ದುಂಬೆ! ಹೊಯ್ಸಳನ ಹೆಗ್ಗಾನ
ನಿಲದಿನ್ನು ಪೇಳೈ ಪಾಲಿಸಪ್ಪಣೆಯ
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...