Home / ಕವನ / ಕವಿತೆ / ಏನು ಪಾಡಲಿ

ಏನು ಪಾಡಲಿ

ಏನ ಪಾಡಲಿ ನಿನ್ನ ಆಮೋದಕಿಂದು
ನೀನಿತ್ತ ಪ್ರೇರಣೆಯು ನಿನ್ನದೀ ಮುರುಳಿ
ಘನ ಪದಕೆ ಪದವಿಟ್ಟು ಧನಿ ಧನಿಯ ಧಾಟಿಯಲಿ
ಘನವರಣ ಹನಿರಸದ ಬಲು ಸಿವುರಿನ
ಎಣಿಸಿಟ್ಟ ಪ್ರಾಸಗಳ ಜೋಡಿಸಿದ ಮೇಣಗಳ
ಕಣಕಣನೆ ದನಿಗೊಡುವ ಗಜ ಗಬ್ಬುಬೇಕೆ

ಕಿರಿ ಪಿರಿಯ ನವನುಡಿಯ ಹೊಳೆ ಹೊನ್ನ ಸರಿಗೆಯಲಿ
ಸರಿದಿಟ್ಟು ತರತರದೈಸಿರಿರಾಗ ವರಸೆಯಲಿ
ಮರಮಠಳಿ ಶೃತಿನೋಡಿ ಹೊಂಗಳಲ ಪ್ರಾಣಗಳ
ಬೆರಳಲ್ಲಿ ನುಡಿಸುತ್ತ ಮನ ಮರೆಸಲೊ

ಹೊಸಪದವ ಹಳೆಪದವ ಹೊಸದಿಟ್ಟು ಹೊಸಪರಿಯ
ಹೊಸಧಾಟಿ ಹೊಸಭಾವ ಪೊಸೆವೊಂದು ಲಾವಣಿಯ
ನಸುನಗುತ ರಸವರಿದು ನೀ ಮೋದ ಪಡುವಂಥ
ಮಿಸುನಿಯಾ ಸ್ಪರ್ಶದಾ ಕೃತಿಯೊಂದು ಬೇಕೋ

ಚಳವಳಿಯ ಭಾವಕಿವೆ ಕಿಡಿ ಇಡುವ ಪದಗಳಿವು
ತಿಳವನ್ಹಿ ಬಿಳಿಜೋತಿಗಿದೆ ಭಕುತ ಮನಧವಿಸು
ಹೊಳೆಯಾಯ್ತು ಗುಪ್ತಾಗ್ನಿ ಉಕ್ಕುತಿದೆ ಜ್ವಾಲೆಯಿದು
ತಿಳಿಹು ಮನದಿಷ್ಟಾರ್ಥ ಪಾಡಲೇನ

ಗುಡ್ಡ ಕಾಡಿನ ರೂಪು ಅಡ್ಡವಿಸಿ ವರಣಿಸಲೊ
ಗುಡ್ಡದಿಂ ಧಡಧಡನೆ ಹಾರ್ವುದರ ಶೃತಿಗೆ?
ಹೆಡ್ಡರೆಲ್ಲರು ಕೂಡಿ ಧೂಳ ರೌರವದಲ್ಲಿ
ಅಡ್ಡಾಡಿ ಮೈಮರವ ಪರಿಯ ಬಣ್ಣಿಸಲೊ?

ನಗರಗಳು ಬೆಳೆದಳಿದು ಹನುಮ ಭೀಮರು ಎದ್ದು
ಜಗವ ತಲ್ಲಣಗೊಳಿಸೆ! ಕಂತಿ ಪಂಪರ ಕವಿತೆ!
ಚಿಗಿದು ಮೊಳಗಲು! ಇಳೆಯು ನಲಿದೊಲಿಯು ತಿರುವಾಗ!
ಜಗದಲ್ಲಿ ಬೆಳದಿಳಿದ ಕಥೆಗಳವು ಬೇಕೆ?

ಆದಿ ಕವಿಯಿಂದೀಚೆ ಪದಶಿಲ್ಪಿಗಳನೆಲ್ಲ
ಸೋದರರ! ಕೊಳಲ ಭಾಂಧವರನ್ನು ಮಾಯೆಯಲಿ
ಓದದರ ಮುಂದೆತ್ತಿ ಸುಳಿದಾಡಿಸುತಲಿನ್ನು
ಹೋದ ವೈಭವವನ್ನು ಕಾಣಿಸಲೊ ಕನಸಲ್ಲಿ?

ಇದ್ದಾಗ ಕರೆ ಎನದೆ ಕೂಡೆನದೆ ಕೊಳ್ಳೆನದೆ
ಹೊಯ್ದೆಸೆದ ಕಲ್ಲಲ್ಲಿ ಹೂತಿಟ್ಟ ಭಕ್ತನನು
ಮುದ್ದಿಟ್ಟು! ಕಡೆಕಡೆಗೆ ಪಾಡುವರು ರಗಳೆಗಳ!
ಸುಯ್ದೆದ್ದು ಮನವದನು ಕೇಳುತಿದೆ ಕೇಳೈ!

ಗೆಳೆಯರಾಗುಂಪಿನದು ಮಧುಯುಗದ! ಮುಧುಗಾನ
ಮೋಳಗುತಿದೆ ಮಹಿಷೂರ ಹೊಂಗಳಲ! ಸವಿಗಾನ
ಬಲು ರವದ ಹೆದ್ದುಂಬೆ! ಹೊಯ್ಸಳನ ಹೆಗ್ಗಾನ
ನಿಲದಿನ್ನು ಪೇಳೈ ಪಾಲಿಸಪ್ಪಣೆಯ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...