Home / ಕವನ / ಕವಿತೆ / ಏನು ಪಾಡಲಿ

ಏನು ಪಾಡಲಿ

ಏನ ಪಾಡಲಿ ನಿನ್ನ ಆಮೋದಕಿಂದು
ನೀನಿತ್ತ ಪ್ರೇರಣೆಯು ನಿನ್ನದೀ ಮುರುಳಿ
ಘನ ಪದಕೆ ಪದವಿಟ್ಟು ಧನಿ ಧನಿಯ ಧಾಟಿಯಲಿ
ಘನವರಣ ಹನಿರಸದ ಬಲು ಸಿವುರಿನ
ಎಣಿಸಿಟ್ಟ ಪ್ರಾಸಗಳ ಜೋಡಿಸಿದ ಮೇಣಗಳ
ಕಣಕಣನೆ ದನಿಗೊಡುವ ಗಜ ಗಬ್ಬುಬೇಕೆ

ಕಿರಿ ಪಿರಿಯ ನವನುಡಿಯ ಹೊಳೆ ಹೊನ್ನ ಸರಿಗೆಯಲಿ
ಸರಿದಿಟ್ಟು ತರತರದೈಸಿರಿರಾಗ ವರಸೆಯಲಿ
ಮರಮಠಳಿ ಶೃತಿನೋಡಿ ಹೊಂಗಳಲ ಪ್ರಾಣಗಳ
ಬೆರಳಲ್ಲಿ ನುಡಿಸುತ್ತ ಮನ ಮರೆಸಲೊ

ಹೊಸಪದವ ಹಳೆಪದವ ಹೊಸದಿಟ್ಟು ಹೊಸಪರಿಯ
ಹೊಸಧಾಟಿ ಹೊಸಭಾವ ಪೊಸೆವೊಂದು ಲಾವಣಿಯ
ನಸುನಗುತ ರಸವರಿದು ನೀ ಮೋದ ಪಡುವಂಥ
ಮಿಸುನಿಯಾ ಸ್ಪರ್ಶದಾ ಕೃತಿಯೊಂದು ಬೇಕೋ

ಚಳವಳಿಯ ಭಾವಕಿವೆ ಕಿಡಿ ಇಡುವ ಪದಗಳಿವು
ತಿಳವನ್ಹಿ ಬಿಳಿಜೋತಿಗಿದೆ ಭಕುತ ಮನಧವಿಸು
ಹೊಳೆಯಾಯ್ತು ಗುಪ್ತಾಗ್ನಿ ಉಕ್ಕುತಿದೆ ಜ್ವಾಲೆಯಿದು
ತಿಳಿಹು ಮನದಿಷ್ಟಾರ್ಥ ಪಾಡಲೇನ

ಗುಡ್ಡ ಕಾಡಿನ ರೂಪು ಅಡ್ಡವಿಸಿ ವರಣಿಸಲೊ
ಗುಡ್ಡದಿಂ ಧಡಧಡನೆ ಹಾರ್ವುದರ ಶೃತಿಗೆ?
ಹೆಡ್ಡರೆಲ್ಲರು ಕೂಡಿ ಧೂಳ ರೌರವದಲ್ಲಿ
ಅಡ್ಡಾಡಿ ಮೈಮರವ ಪರಿಯ ಬಣ್ಣಿಸಲೊ?

ನಗರಗಳು ಬೆಳೆದಳಿದು ಹನುಮ ಭೀಮರು ಎದ್ದು
ಜಗವ ತಲ್ಲಣಗೊಳಿಸೆ! ಕಂತಿ ಪಂಪರ ಕವಿತೆ!
ಚಿಗಿದು ಮೊಳಗಲು! ಇಳೆಯು ನಲಿದೊಲಿಯು ತಿರುವಾಗ!
ಜಗದಲ್ಲಿ ಬೆಳದಿಳಿದ ಕಥೆಗಳವು ಬೇಕೆ?

ಆದಿ ಕವಿಯಿಂದೀಚೆ ಪದಶಿಲ್ಪಿಗಳನೆಲ್ಲ
ಸೋದರರ! ಕೊಳಲ ಭಾಂಧವರನ್ನು ಮಾಯೆಯಲಿ
ಓದದರ ಮುಂದೆತ್ತಿ ಸುಳಿದಾಡಿಸುತಲಿನ್ನು
ಹೋದ ವೈಭವವನ್ನು ಕಾಣಿಸಲೊ ಕನಸಲ್ಲಿ?

ಇದ್ದಾಗ ಕರೆ ಎನದೆ ಕೂಡೆನದೆ ಕೊಳ್ಳೆನದೆ
ಹೊಯ್ದೆಸೆದ ಕಲ್ಲಲ್ಲಿ ಹೂತಿಟ್ಟ ಭಕ್ತನನು
ಮುದ್ದಿಟ್ಟು! ಕಡೆಕಡೆಗೆ ಪಾಡುವರು ರಗಳೆಗಳ!
ಸುಯ್ದೆದ್ದು ಮನವದನು ಕೇಳುತಿದೆ ಕೇಳೈ!

ಗೆಳೆಯರಾಗುಂಪಿನದು ಮಧುಯುಗದ! ಮುಧುಗಾನ
ಮೋಳಗುತಿದೆ ಮಹಿಷೂರ ಹೊಂಗಳಲ! ಸವಿಗಾನ
ಬಲು ರವದ ಹೆದ್ದುಂಬೆ! ಹೊಯ್ಸಳನ ಹೆಗ್ಗಾನ
ನಿಲದಿನ್ನು ಪೇಳೈ ಪಾಲಿಸಪ್ಪಣೆಯ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...