Home / ಕವನ / ಕವಿತೆ / ಏನು ಪಾಡಲಿ

ಏನು ಪಾಡಲಿ

ಏನ ಪಾಡಲಿ ನಿನ್ನ ಆಮೋದಕಿಂದು
ನೀನಿತ್ತ ಪ್ರೇರಣೆಯು ನಿನ್ನದೀ ಮುರುಳಿ
ಘನ ಪದಕೆ ಪದವಿಟ್ಟು ಧನಿ ಧನಿಯ ಧಾಟಿಯಲಿ
ಘನವರಣ ಹನಿರಸದ ಬಲು ಸಿವುರಿನ
ಎಣಿಸಿಟ್ಟ ಪ್ರಾಸಗಳ ಜೋಡಿಸಿದ ಮೇಣಗಳ
ಕಣಕಣನೆ ದನಿಗೊಡುವ ಗಜ ಗಬ್ಬುಬೇಕೆ

ಕಿರಿ ಪಿರಿಯ ನವನುಡಿಯ ಹೊಳೆ ಹೊನ್ನ ಸರಿಗೆಯಲಿ
ಸರಿದಿಟ್ಟು ತರತರದೈಸಿರಿರಾಗ ವರಸೆಯಲಿ
ಮರಮಠಳಿ ಶೃತಿನೋಡಿ ಹೊಂಗಳಲ ಪ್ರಾಣಗಳ
ಬೆರಳಲ್ಲಿ ನುಡಿಸುತ್ತ ಮನ ಮರೆಸಲೊ

ಹೊಸಪದವ ಹಳೆಪದವ ಹೊಸದಿಟ್ಟು ಹೊಸಪರಿಯ
ಹೊಸಧಾಟಿ ಹೊಸಭಾವ ಪೊಸೆವೊಂದು ಲಾವಣಿಯ
ನಸುನಗುತ ರಸವರಿದು ನೀ ಮೋದ ಪಡುವಂಥ
ಮಿಸುನಿಯಾ ಸ್ಪರ್ಶದಾ ಕೃತಿಯೊಂದು ಬೇಕೋ

ಚಳವಳಿಯ ಭಾವಕಿವೆ ಕಿಡಿ ಇಡುವ ಪದಗಳಿವು
ತಿಳವನ್ಹಿ ಬಿಳಿಜೋತಿಗಿದೆ ಭಕುತ ಮನಧವಿಸು
ಹೊಳೆಯಾಯ್ತು ಗುಪ್ತಾಗ್ನಿ ಉಕ್ಕುತಿದೆ ಜ್ವಾಲೆಯಿದು
ತಿಳಿಹು ಮನದಿಷ್ಟಾರ್ಥ ಪಾಡಲೇನ

ಗುಡ್ಡ ಕಾಡಿನ ರೂಪು ಅಡ್ಡವಿಸಿ ವರಣಿಸಲೊ
ಗುಡ್ಡದಿಂ ಧಡಧಡನೆ ಹಾರ್ವುದರ ಶೃತಿಗೆ?
ಹೆಡ್ಡರೆಲ್ಲರು ಕೂಡಿ ಧೂಳ ರೌರವದಲ್ಲಿ
ಅಡ್ಡಾಡಿ ಮೈಮರವ ಪರಿಯ ಬಣ್ಣಿಸಲೊ?

ನಗರಗಳು ಬೆಳೆದಳಿದು ಹನುಮ ಭೀಮರು ಎದ್ದು
ಜಗವ ತಲ್ಲಣಗೊಳಿಸೆ! ಕಂತಿ ಪಂಪರ ಕವಿತೆ!
ಚಿಗಿದು ಮೊಳಗಲು! ಇಳೆಯು ನಲಿದೊಲಿಯು ತಿರುವಾಗ!
ಜಗದಲ್ಲಿ ಬೆಳದಿಳಿದ ಕಥೆಗಳವು ಬೇಕೆ?

ಆದಿ ಕವಿಯಿಂದೀಚೆ ಪದಶಿಲ್ಪಿಗಳನೆಲ್ಲ
ಸೋದರರ! ಕೊಳಲ ಭಾಂಧವರನ್ನು ಮಾಯೆಯಲಿ
ಓದದರ ಮುಂದೆತ್ತಿ ಸುಳಿದಾಡಿಸುತಲಿನ್ನು
ಹೋದ ವೈಭವವನ್ನು ಕಾಣಿಸಲೊ ಕನಸಲ್ಲಿ?

ಇದ್ದಾಗ ಕರೆ ಎನದೆ ಕೂಡೆನದೆ ಕೊಳ್ಳೆನದೆ
ಹೊಯ್ದೆಸೆದ ಕಲ್ಲಲ್ಲಿ ಹೂತಿಟ್ಟ ಭಕ್ತನನು
ಮುದ್ದಿಟ್ಟು! ಕಡೆಕಡೆಗೆ ಪಾಡುವರು ರಗಳೆಗಳ!
ಸುಯ್ದೆದ್ದು ಮನವದನು ಕೇಳುತಿದೆ ಕೇಳೈ!

ಗೆಳೆಯರಾಗುಂಪಿನದು ಮಧುಯುಗದ! ಮುಧುಗಾನ
ಮೋಳಗುತಿದೆ ಮಹಿಷೂರ ಹೊಂಗಳಲ! ಸವಿಗಾನ
ಬಲು ರವದ ಹೆದ್ದುಂಬೆ! ಹೊಯ್ಸಳನ ಹೆಗ್ಗಾನ
ನಿಲದಿನ್ನು ಪೇಳೈ ಪಾಲಿಸಪ್ಪಣೆಯ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...