Home / ಕವನ / ಕವಿತೆ / ಉದಯ ರಾಗ

ಉದಯ ರಾಗ

ಬೇಸರವಾಗಿದೆ ನಗರದಲಾಟ
ಧೂಸರ ಧೂಳಿನ ಜೀವನವು
ಆಶಿಸಿ ಚಿಗುರೊಳಗಾಡಿತು ಗಾಳಿ
ಭಾಷೆಗೆ ನಿಲುಕದ ಭಾವಕೆ ಬೆಂದು.
ಬೇಗ ನಡೀ ಹೊರಡೇಳು ನಡೀ
ಕೂಗಿದಳಾವಳೊ ಕಾಡಕಿನ್ನರಿಯು

ಸೂಟಿಯು ಸಂದರೆ ನಂದಿಯ ಕೂಟ
ನೋಟಕೆ ಹಬ್ಬವು ಜೋಗದ ಪಾತ
ಮಾಟದ ಪುತ್ಥಳಿ ಬೇಲೂರ ನೋಟ
ಆಟದಲೇರಲು ದತ್ತನ ಪೀಟ.
ಬೇಗನಡೀ ನಡಿ ಬೇಗನಡೀ
ಕೂಗಿತು ಕಾಡಿಸಿ ನಾಡವೈತಾಳಿ!

ಆ ಯತಿ ಪರ್ವತ ಕಳೆಗಳ ಸುಟ್ಟು
ಕಾಯುತಲಿಹುದಿನ್ನು ಜೀವನ ಘನಗೆ
ಬಾಯಾರಿದೀಪಕ್ಕಿ ಬೇಯುತಲಿಹುದು
ಆಯತದಿಂಬಹ ಮುಂಗಾರ ಹನಿಗೆ,
ಬೇಗನಡೀ ಹೊರಡೇಳುನಡೀ
ಕೂಗಿದಳಾವಳೊ ಕಾಡಕಿನ್ನರಿಯು!

ಪಡವಣ ಮಣಲೆದ್ದು ಹೂಣಿದೆ ಲಿಂಗ
ಅಡಿಯಿಡು ಅಲ್ಲಿಗೆ ಬಗೆದು ನೋಡುವಣ
ಮುಡಿಯೆಲ್ಲ ಸಡಲಿದೆ ವನದೇವಿಗೇಕೊ
ನಡಿನಡಿ! ಯಾತಂಕವೇನೆಂದು ಬಗೆವೆ.
ಬೇಗನಡೀ ನಡಿ ಏಳುನಡೀ
ಕೂಗಿತು ಕಾತರಗೊಂಡಿಹ ನಾಡು!

ಕೋಗಿಲೆ ಪಾಡಲು ಕೇಕೆಯು ಕುಣಿಯೆ
ಕೂಗಲು ನಿರ್ಝರಿ ತೂಗೆ ಮಂಜರಿಯು
ಬಾಗಲು ತನೆಗಳು ರೇಗಲು ವೀಚಿ
ಈಗೆದ್ದು ಬಂದರೆ ಬಾರೆನೆ ವನವು.
ಬೇಗನಡೀ ಹೊರಡೇಳು ನಡಿ!
ಕೂಗಿತು ನಾಳಿನ ಕೇದಿಗೆ ಸುಳಿದು.

ಪೂವು ಪೂವಾಡಲು ಕಂಬನಿದುಂಬಿ
ಆವರಿಸುತಲಿಹುದಾರ್ಯರ ಕಂಪು
ಭಾವದ ಗರಿಯೇರು ಜಾಗರ ಮನವೆ
ಜೀವನದರಳನು ಅರುಣಗೊಪ್ಪಿಸುವೆ.
ಬೇಗನಡೀ ಮನ ಓಡುನಡೀ
ಕೂಗಿತು ಕಾಹಳೆ ನಾಳೆಯ ನೆನೆದು!

ಕಾವೇರಿ! ಎಚ್ಚತ್ತು ಪಾಡುತಲಿಹಳು
ಸಾವೇರಿ ರಾಗದ ಗಾನ ಗೀತೆಗಳ
ನಾವೇರಿ ಪೋಗುವ ಜಾಗರದವರು
ಭಾವ ವಿಮಾನದೊಳರುಣ ದಿಬ್ಬಣಕೆ.
ಬೇಗನಡೀ ಹೊರಡೇಳು ನಡೀ
ಕೂಗಿತು ಖಂಡಿತ ನಾಡವೈತಾಳಿ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...