ನಾವಿಕರು

|| ನಾವಿಕರಾವಿಹವೆವು ಜೀವಾರ್ಣವದಲ್ಲಿ ತೇಲುತ್ತಿಹೆವು ||

ನಾವು ಜನುಮದ ನಾವೆ ಯೇರ್‍ದೆವು
ಸಾವು ನೋವನು ದೂರಲಿರುವೆವು
ಜೀವಕಕ್ಷರ ಭಾವ ಹೊಳೆಯಲಿ
-ಜಾವ ಜಾವಕೆ ನಾಡನೆನಹಲಿ-

ಅಲ್ಲಿತೆರೆ ಕೊರೆ ಕಲ್ಲು ಸುಳಿಯಿವೆ!
ಇಲ್ಲಿ ಹೂಡಿರಿ! ದೋಣಿಯೆನ್ನುತ
ಎಲ್ಲಸಾಗರ ನಾಭಿಯಲ್ಲಿರೆ!
-ಚಲ್ಪ ಬುದ್ದನ ಗರುಡದೀಪವು-

ನುಡಿದು ನಡೆಯುತ ತೇದು ತೊಳೆಯುತ
ಗಡಿಯ ಬೆಳಗುತ ನಿತ್ಯ ಜೀವನ-
ಉಡಿಗೆ ಯುಡಿಸುತ ತಿನಿಸಿನಲಿವೆಡೆ
-ಒಡನೆ ಯಾಡಲಿ ಗಾಂಧಿರೂಹದು –

ನೋಡಿನಲಿಯಲು-ಹೂಡಿದಣಿಯಲು
ಕೂಡೆಕರೆಯಲು-ಜೋಡಿಗತಿಥಿಯ!
ಕಾಡಿರವಿಠಾ ಕೂರಜಿಹ್ವೆಯು
-ಹಾಡಕಲಿಸಲಿ ನಾಡನೆನಹಿನ-

ನಲವುನೋವಿನ ಉಬ್ಬರಿಳಿತವ
ಗೆಲಿದು ತೇಲಲು ಜೀವಜಲಧಿಯ
ಲಿಳಿದು ಹೊರಟೆವು! ನಾಡನೆನಹಿನೊ
-ಳಳಿವುದುಳಿವುದ ಬಲ್ಲನಾತನು- ನಾವಿಕರಾನಿಹೆವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೩೬
Next post ನವಿಲುಗರಿ – ೯

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…