ನರ-ವಾನರ

ಕಾಡಿನ ಕೋತಿ ಬಿದುರಿನ ಚದುರೆ ಖಾಸ ಬಂಗ್ಲಿ ಬೋನಲ್ಲಿ……….
ವಿಕಾರ! ವಿಕಟ! ನಗೆಗೇಡೆಂದು ಹಳಿವರು ನಾವು ಮಾನವರು!
ಗಡವಮಂಗ, ಬಾಲದಕೋತಿ, ಮೊಂಡು ಬಾಲ, ನೀಲಮೂಗು,
ಈ ಪರಿಯುಂಟು ಮಂಗಗಳು ಹಣ್ಣೆ ತಿಂದು ಜೀವಿಪವು;
ಸಂಶಯ ಬಂತು ಆಕೆಗೆ! ನೀವೇ ನೆಂಬಿರಿ ಉತ್ತಮರೆ?
ಮಾನವರು ನಾವು! ವಾನರರು ಅವು! ಯಾರು ಹೇಳಿ ನಗೆಗೀಡು?
ಕೂದಲು ಉದುರೆ, ಹಲ್ಲು ಕಳಚೆ, ಗುಳ್ಳೆಗಣ್ಣು ಗಜ್ಜುಗವಾಗೆ!
ಚರ್ಮವೊಂದೇ ವ್ಯತ್ಯಾಸ! ವಸ್ತ್ರವೊಂದೇ ವ್ಯತ್ಯಾಸ!
ಎಂಥ ವಿಕಾರ ಅಡಗಿದೆ ಇಲ್ಲಿ ಮಾನವ ದೇಹದಲ್ಲಿ……..!
ಪರಿಯಿಷ್ಟೆ ಇನ್ನೂ ಸೂಕ್ಷ್ಮ ತೋರಿಸಬಲ್ಲೆ -ತೋರಿಸಿ ನಿಮ್ಮ ನೋಯಿಸಲೊಲ್ಲೆ!
ಆದರೆ, ನೋಡಿ, ಒಮ್ಮಾತಿನಲ್ಲಿ ಇದ್ದರೆ ಬೋನಿನ ಒಳಗಡೆ ನಾವು
ಕಾಣುವವೆಷ್ಟೋ ಅವಕಿಂತ ಅ-ವ-ಲ-ಕ್ಷ-ಣ!…………….
ತುಸುವೂ ಇಲ್ಲ ವ್ಯಾಯಾಮ! ಯೌವ್ವನ ಕಳೆಯಲು ಪರಿತಾಪ!
ನುಂಗುವುದಂತೂ ಲಾಡು, ಚಿರೋಟಿ ತಿಂದರೆ ಅರಗದು ನಮಗೇ ಗೊತ್ತು!
ಗುಡ್ಡದ ಗಾತ್ರ, ತಂಬಾಕು ಸೇದಲು ಸಾಲದು ನಿತ್ಯ ನಿತ್ಯ!
ಸಾಗರದಷ್ಟು ಸಾರಾಯಿ ಕುಡಿಯದೆ ತೃಪ್ತಿ ನಮಗೆಲ್ಲಿ?
ಯಾಕೋ ಏನೋ ಯಾರಿಗೆ ಗೊತ್ತು ಮಾನವರೆಲ್ಲರ ಪರಿಯಷ್ಟೆ!
ಕಾಯಗಳನ್ನು ಕಸುವಾಗಿಡಲು ಹಣ್ಣೇತಿಂದು ಇರಬಹುದಲ್ಲ?
ಆದರೆ ನೋಡಿ ಹಣ್ಣೆಲ್ಲ ವಾನರರಾಹಾರ!

ಹಣ್ಣು ಎಂದರೆ ಸಾಮಾನ್ಯ ಅಲ್ಲವು ಕೇಳಿ ನಿವೆಲ್ಲ!
ಬೇಸಿಗೆ ಬಿಸಿಲು, ಮಾಗೀ ಗಾಳೀ, ಭೂಮೀ ಸಾರ, ಜಡಿಮಳೆಯು
ಎಲ್ಲ ಸೇರಿ ಹಣ್ಣಿನ ರೂಪ ತಿಳಿಯದೆ? ನಿಮಗೆ? ಈ ಗುಟ್ಟು?
ದೇಹವ ಶೋಧಿಸಿ, ಮಿದುಳನು ತೊಳೆದು,
ದ್ವೇಷದ ದೋಷದ, ಇಲ್ಲಣ ತೊಡೆದು
ಮಾನವ ದೇಹವ ದೇವರ ಭಾವಕೆ ಸರಿಸಮನೆನಿಸಲು ಹಣ್ಣೇ ಬೇಕು!
ಆದರೆ, ನಾವು ದೇವರ ನೋಡಿಸಿ ಹಾ-ಯಾ-ಗಿ-ಹೆ-ವು!…………….
ಅದಕೇ ತಾನೇ, ಅವು ತಾವಾಗಿ ಕಾಣುತ ನಮ್ಮನುಹರಿದೂ ಹಾರೀ,
ಹತ್ತೀ, ಕುಣಿದೂ!…………..
ಬೆಳಗೂ ಬೈಗೂ, ತಲೆಕೆಳಗಾಗಿ ನೇತುಬಿದ್ದಿವೆ ಬೋನಲ್ಲಿ!
ಮಾಡುತಿಹನೆ ಅಪಹಾಸ್ಯ? ಮಾಡುತಿಹವೆ ನೀತಿಬೋಧೆ?
ನಗರದ ನರರ ಪರಿಮಿಷ್ಟೆ! ಬೋನಿನ ವಾನರರರಿವಷ್ಟೆ
ಅದು ನೋಡಿದರೆ ದೈವತ್ವ! ಅದರ ವಿಕಾರವೆ ನಮಗೆ ಮಹತ್ವ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೩೭
Next post ನವಿಲುಗರಿ – ೧೦

ಸಣ್ಣ ಕತೆ

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…