Home / ಕವನ / ಕವಿತೆ / ನರ-ವಾನರ

ನರ-ವಾನರ

ಕಾಡಿನ ಕೋತಿ ಬಿದುರಿನ ಚದುರೆ ಖಾಸ ಬಂಗ್ಲಿ ಬೋನಲ್ಲಿ……….
ವಿಕಾರ! ವಿಕಟ! ನಗೆಗೇಡೆಂದು ಹಳಿವರು ನಾವು ಮಾನವರು!
ಗಡವಮಂಗ, ಬಾಲದಕೋತಿ, ಮೊಂಡು ಬಾಲ, ನೀಲಮೂಗು,
ಈ ಪರಿಯುಂಟು ಮಂಗಗಳು ಹಣ್ಣೆ ತಿಂದು ಜೀವಿಪವು;
ಸಂಶಯ ಬಂತು ಆಕೆಗೆ! ನೀವೇ ನೆಂಬಿರಿ ಉತ್ತಮರೆ?
ಮಾನವರು ನಾವು! ವಾನರರು ಅವು! ಯಾರು ಹೇಳಿ ನಗೆಗೀಡು?
ಕೂದಲು ಉದುರೆ, ಹಲ್ಲು ಕಳಚೆ, ಗುಳ್ಳೆಗಣ್ಣು ಗಜ್ಜುಗವಾಗೆ!
ಚರ್ಮವೊಂದೇ ವ್ಯತ್ಯಾಸ! ವಸ್ತ್ರವೊಂದೇ ವ್ಯತ್ಯಾಸ!
ಎಂಥ ವಿಕಾರ ಅಡಗಿದೆ ಇಲ್ಲಿ ಮಾನವ ದೇಹದಲ್ಲಿ……..!
ಪರಿಯಿಷ್ಟೆ ಇನ್ನೂ ಸೂಕ್ಷ್ಮ ತೋರಿಸಬಲ್ಲೆ -ತೋರಿಸಿ ನಿಮ್ಮ ನೋಯಿಸಲೊಲ್ಲೆ!
ಆದರೆ, ನೋಡಿ, ಒಮ್ಮಾತಿನಲ್ಲಿ ಇದ್ದರೆ ಬೋನಿನ ಒಳಗಡೆ ನಾವು
ಕಾಣುವವೆಷ್ಟೋ ಅವಕಿಂತ ಅ-ವ-ಲ-ಕ್ಷ-ಣ!…………….
ತುಸುವೂ ಇಲ್ಲ ವ್ಯಾಯಾಮ! ಯೌವ್ವನ ಕಳೆಯಲು ಪರಿತಾಪ!
ನುಂಗುವುದಂತೂ ಲಾಡು, ಚಿರೋಟಿ ತಿಂದರೆ ಅರಗದು ನಮಗೇ ಗೊತ್ತು!
ಗುಡ್ಡದ ಗಾತ್ರ, ತಂಬಾಕು ಸೇದಲು ಸಾಲದು ನಿತ್ಯ ನಿತ್ಯ!
ಸಾಗರದಷ್ಟು ಸಾರಾಯಿ ಕುಡಿಯದೆ ತೃಪ್ತಿ ನಮಗೆಲ್ಲಿ?
ಯಾಕೋ ಏನೋ ಯಾರಿಗೆ ಗೊತ್ತು ಮಾನವರೆಲ್ಲರ ಪರಿಯಷ್ಟೆ!
ಕಾಯಗಳನ್ನು ಕಸುವಾಗಿಡಲು ಹಣ್ಣೇತಿಂದು ಇರಬಹುದಲ್ಲ?
ಆದರೆ ನೋಡಿ ಹಣ್ಣೆಲ್ಲ ವಾನರರಾಹಾರ!

ಹಣ್ಣು ಎಂದರೆ ಸಾಮಾನ್ಯ ಅಲ್ಲವು ಕೇಳಿ ನಿವೆಲ್ಲ!
ಬೇಸಿಗೆ ಬಿಸಿಲು, ಮಾಗೀ ಗಾಳೀ, ಭೂಮೀ ಸಾರ, ಜಡಿಮಳೆಯು
ಎಲ್ಲ ಸೇರಿ ಹಣ್ಣಿನ ರೂಪ ತಿಳಿಯದೆ? ನಿಮಗೆ? ಈ ಗುಟ್ಟು?
ದೇಹವ ಶೋಧಿಸಿ, ಮಿದುಳನು ತೊಳೆದು,
ದ್ವೇಷದ ದೋಷದ, ಇಲ್ಲಣ ತೊಡೆದು
ಮಾನವ ದೇಹವ ದೇವರ ಭಾವಕೆ ಸರಿಸಮನೆನಿಸಲು ಹಣ್ಣೇ ಬೇಕು!
ಆದರೆ, ನಾವು ದೇವರ ನೋಡಿಸಿ ಹಾ-ಯಾ-ಗಿ-ಹೆ-ವು!…………….
ಅದಕೇ ತಾನೇ, ಅವು ತಾವಾಗಿ ಕಾಣುತ ನಮ್ಮನುಹರಿದೂ ಹಾರೀ,
ಹತ್ತೀ, ಕುಣಿದೂ!…………..
ಬೆಳಗೂ ಬೈಗೂ, ತಲೆಕೆಳಗಾಗಿ ನೇತುಬಿದ್ದಿವೆ ಬೋನಲ್ಲಿ!
ಮಾಡುತಿಹನೆ ಅಪಹಾಸ್ಯ? ಮಾಡುತಿಹವೆ ನೀತಿಬೋಧೆ?
ನಗರದ ನರರ ಪರಿಮಿಷ್ಟೆ! ಬೋನಿನ ವಾನರರರಿವಷ್ಟೆ
ಅದು ನೋಡಿದರೆ ದೈವತ್ವ! ಅದರ ವಿಕಾರವೆ ನಮಗೆ ಮಹತ್ವ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...