ನರ-ವಾನರ

ಕಾಡಿನ ಕೋತಿ ಬಿದುರಿನ ಚದುರೆ ಖಾಸ ಬಂಗ್ಲಿ ಬೋನಲ್ಲಿ……….
ವಿಕಾರ! ವಿಕಟ! ನಗೆಗೇಡೆಂದು ಹಳಿವರು ನಾವು ಮಾನವರು!
ಗಡವಮಂಗ, ಬಾಲದಕೋತಿ, ಮೊಂಡು ಬಾಲ, ನೀಲಮೂಗು,
ಈ ಪರಿಯುಂಟು ಮಂಗಗಳು ಹಣ್ಣೆ ತಿಂದು ಜೀವಿಪವು;
ಸಂಶಯ ಬಂತು ಆಕೆಗೆ! ನೀವೇ ನೆಂಬಿರಿ ಉತ್ತಮರೆ?
ಮಾನವರು ನಾವು! ವಾನರರು ಅವು! ಯಾರು ಹೇಳಿ ನಗೆಗೀಡು?
ಕೂದಲು ಉದುರೆ, ಹಲ್ಲು ಕಳಚೆ, ಗುಳ್ಳೆಗಣ್ಣು ಗಜ್ಜುಗವಾಗೆ!
ಚರ್ಮವೊಂದೇ ವ್ಯತ್ಯಾಸ! ವಸ್ತ್ರವೊಂದೇ ವ್ಯತ್ಯಾಸ!
ಎಂಥ ವಿಕಾರ ಅಡಗಿದೆ ಇಲ್ಲಿ ಮಾನವ ದೇಹದಲ್ಲಿ……..!
ಪರಿಯಿಷ್ಟೆ ಇನ್ನೂ ಸೂಕ್ಷ್ಮ ತೋರಿಸಬಲ್ಲೆ -ತೋರಿಸಿ ನಿಮ್ಮ ನೋಯಿಸಲೊಲ್ಲೆ!
ಆದರೆ, ನೋಡಿ, ಒಮ್ಮಾತಿನಲ್ಲಿ ಇದ್ದರೆ ಬೋನಿನ ಒಳಗಡೆ ನಾವು
ಕಾಣುವವೆಷ್ಟೋ ಅವಕಿಂತ ಅ-ವ-ಲ-ಕ್ಷ-ಣ!…………….
ತುಸುವೂ ಇಲ್ಲ ವ್ಯಾಯಾಮ! ಯೌವ್ವನ ಕಳೆಯಲು ಪರಿತಾಪ!
ನುಂಗುವುದಂತೂ ಲಾಡು, ಚಿರೋಟಿ ತಿಂದರೆ ಅರಗದು ನಮಗೇ ಗೊತ್ತು!
ಗುಡ್ಡದ ಗಾತ್ರ, ತಂಬಾಕು ಸೇದಲು ಸಾಲದು ನಿತ್ಯ ನಿತ್ಯ!
ಸಾಗರದಷ್ಟು ಸಾರಾಯಿ ಕುಡಿಯದೆ ತೃಪ್ತಿ ನಮಗೆಲ್ಲಿ?
ಯಾಕೋ ಏನೋ ಯಾರಿಗೆ ಗೊತ್ತು ಮಾನವರೆಲ್ಲರ ಪರಿಯಷ್ಟೆ!
ಕಾಯಗಳನ್ನು ಕಸುವಾಗಿಡಲು ಹಣ್ಣೇತಿಂದು ಇರಬಹುದಲ್ಲ?
ಆದರೆ ನೋಡಿ ಹಣ್ಣೆಲ್ಲ ವಾನರರಾಹಾರ!

ಹಣ್ಣು ಎಂದರೆ ಸಾಮಾನ್ಯ ಅಲ್ಲವು ಕೇಳಿ ನಿವೆಲ್ಲ!
ಬೇಸಿಗೆ ಬಿಸಿಲು, ಮಾಗೀ ಗಾಳೀ, ಭೂಮೀ ಸಾರ, ಜಡಿಮಳೆಯು
ಎಲ್ಲ ಸೇರಿ ಹಣ್ಣಿನ ರೂಪ ತಿಳಿಯದೆ? ನಿಮಗೆ? ಈ ಗುಟ್ಟು?
ದೇಹವ ಶೋಧಿಸಿ, ಮಿದುಳನು ತೊಳೆದು,
ದ್ವೇಷದ ದೋಷದ, ಇಲ್ಲಣ ತೊಡೆದು
ಮಾನವ ದೇಹವ ದೇವರ ಭಾವಕೆ ಸರಿಸಮನೆನಿಸಲು ಹಣ್ಣೇ ಬೇಕು!
ಆದರೆ, ನಾವು ದೇವರ ನೋಡಿಸಿ ಹಾ-ಯಾ-ಗಿ-ಹೆ-ವು!…………….
ಅದಕೇ ತಾನೇ, ಅವು ತಾವಾಗಿ ಕಾಣುತ ನಮ್ಮನುಹರಿದೂ ಹಾರೀ,
ಹತ್ತೀ, ಕುಣಿದೂ!…………..
ಬೆಳಗೂ ಬೈಗೂ, ತಲೆಕೆಳಗಾಗಿ ನೇತುಬಿದ್ದಿವೆ ಬೋನಲ್ಲಿ!
ಮಾಡುತಿಹನೆ ಅಪಹಾಸ್ಯ? ಮಾಡುತಿಹವೆ ನೀತಿಬೋಧೆ?
ನಗರದ ನರರ ಪರಿಮಿಷ್ಟೆ! ಬೋನಿನ ವಾನರರರಿವಷ್ಟೆ
ಅದು ನೋಡಿದರೆ ದೈವತ್ವ! ಅದರ ವಿಕಾರವೆ ನಮಗೆ ಮಹತ್ವ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೩೭
Next post ನವಿಲುಗರಿ – ೧೦

ಸಣ್ಣ ಕತೆ

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

cheap jordans|wholesale air max|wholesale jordans|wholesale jewelry|wholesale jerseys