Home / ಕವನ / ಕವಿತೆ / ನರ-ವಾನರ

ನರ-ವಾನರ

ಕಾಡಿನ ಕೋತಿ ಬಿದುರಿನ ಚದುರೆ ಖಾಸ ಬಂಗ್ಲಿ ಬೋನಲ್ಲಿ……….
ವಿಕಾರ! ವಿಕಟ! ನಗೆಗೇಡೆಂದು ಹಳಿವರು ನಾವು ಮಾನವರು!
ಗಡವಮಂಗ, ಬಾಲದಕೋತಿ, ಮೊಂಡು ಬಾಲ, ನೀಲಮೂಗು,
ಈ ಪರಿಯುಂಟು ಮಂಗಗಳು ಹಣ್ಣೆ ತಿಂದು ಜೀವಿಪವು;
ಸಂಶಯ ಬಂತು ಆಕೆಗೆ! ನೀವೇ ನೆಂಬಿರಿ ಉತ್ತಮರೆ?
ಮಾನವರು ನಾವು! ವಾನರರು ಅವು! ಯಾರು ಹೇಳಿ ನಗೆಗೀಡು?
ಕೂದಲು ಉದುರೆ, ಹಲ್ಲು ಕಳಚೆ, ಗುಳ್ಳೆಗಣ್ಣು ಗಜ್ಜುಗವಾಗೆ!
ಚರ್ಮವೊಂದೇ ವ್ಯತ್ಯಾಸ! ವಸ್ತ್ರವೊಂದೇ ವ್ಯತ್ಯಾಸ!
ಎಂಥ ವಿಕಾರ ಅಡಗಿದೆ ಇಲ್ಲಿ ಮಾನವ ದೇಹದಲ್ಲಿ……..!
ಪರಿಯಿಷ್ಟೆ ಇನ್ನೂ ಸೂಕ್ಷ್ಮ ತೋರಿಸಬಲ್ಲೆ -ತೋರಿಸಿ ನಿಮ್ಮ ನೋಯಿಸಲೊಲ್ಲೆ!
ಆದರೆ, ನೋಡಿ, ಒಮ್ಮಾತಿನಲ್ಲಿ ಇದ್ದರೆ ಬೋನಿನ ಒಳಗಡೆ ನಾವು
ಕಾಣುವವೆಷ್ಟೋ ಅವಕಿಂತ ಅ-ವ-ಲ-ಕ್ಷ-ಣ!…………….
ತುಸುವೂ ಇಲ್ಲ ವ್ಯಾಯಾಮ! ಯೌವ್ವನ ಕಳೆಯಲು ಪರಿತಾಪ!
ನುಂಗುವುದಂತೂ ಲಾಡು, ಚಿರೋಟಿ ತಿಂದರೆ ಅರಗದು ನಮಗೇ ಗೊತ್ತು!
ಗುಡ್ಡದ ಗಾತ್ರ, ತಂಬಾಕು ಸೇದಲು ಸಾಲದು ನಿತ್ಯ ನಿತ್ಯ!
ಸಾಗರದಷ್ಟು ಸಾರಾಯಿ ಕುಡಿಯದೆ ತೃಪ್ತಿ ನಮಗೆಲ್ಲಿ?
ಯಾಕೋ ಏನೋ ಯಾರಿಗೆ ಗೊತ್ತು ಮಾನವರೆಲ್ಲರ ಪರಿಯಷ್ಟೆ!
ಕಾಯಗಳನ್ನು ಕಸುವಾಗಿಡಲು ಹಣ್ಣೇತಿಂದು ಇರಬಹುದಲ್ಲ?
ಆದರೆ ನೋಡಿ ಹಣ್ಣೆಲ್ಲ ವಾನರರಾಹಾರ!

ಹಣ್ಣು ಎಂದರೆ ಸಾಮಾನ್ಯ ಅಲ್ಲವು ಕೇಳಿ ನಿವೆಲ್ಲ!
ಬೇಸಿಗೆ ಬಿಸಿಲು, ಮಾಗೀ ಗಾಳೀ, ಭೂಮೀ ಸಾರ, ಜಡಿಮಳೆಯು
ಎಲ್ಲ ಸೇರಿ ಹಣ್ಣಿನ ರೂಪ ತಿಳಿಯದೆ? ನಿಮಗೆ? ಈ ಗುಟ್ಟು?
ದೇಹವ ಶೋಧಿಸಿ, ಮಿದುಳನು ತೊಳೆದು,
ದ್ವೇಷದ ದೋಷದ, ಇಲ್ಲಣ ತೊಡೆದು
ಮಾನವ ದೇಹವ ದೇವರ ಭಾವಕೆ ಸರಿಸಮನೆನಿಸಲು ಹಣ್ಣೇ ಬೇಕು!
ಆದರೆ, ನಾವು ದೇವರ ನೋಡಿಸಿ ಹಾ-ಯಾ-ಗಿ-ಹೆ-ವು!…………….
ಅದಕೇ ತಾನೇ, ಅವು ತಾವಾಗಿ ಕಾಣುತ ನಮ್ಮನುಹರಿದೂ ಹಾರೀ,
ಹತ್ತೀ, ಕುಣಿದೂ!…………..
ಬೆಳಗೂ ಬೈಗೂ, ತಲೆಕೆಳಗಾಗಿ ನೇತುಬಿದ್ದಿವೆ ಬೋನಲ್ಲಿ!
ಮಾಡುತಿಹನೆ ಅಪಹಾಸ್ಯ? ಮಾಡುತಿಹವೆ ನೀತಿಬೋಧೆ?
ನಗರದ ನರರ ಪರಿಮಿಷ್ಟೆ! ಬೋನಿನ ವಾನರರರಿವಷ್ಟೆ
ಅದು ನೋಡಿದರೆ ದೈವತ್ವ! ಅದರ ವಿಕಾರವೆ ನಮಗೆ ಮಹತ್ವ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...