Home / ಕವನ / ಕವಿತೆ / ನರ-ವಾನರ

ನರ-ವಾನರ

ಕಾಡಿನ ಕೋತಿ ಬಿದುರಿನ ಚದುರೆ ಖಾಸ ಬಂಗ್ಲಿ ಬೋನಲ್ಲಿ……….
ವಿಕಾರ! ವಿಕಟ! ನಗೆಗೇಡೆಂದು ಹಳಿವರು ನಾವು ಮಾನವರು!
ಗಡವಮಂಗ, ಬಾಲದಕೋತಿ, ಮೊಂಡು ಬಾಲ, ನೀಲಮೂಗು,
ಈ ಪರಿಯುಂಟು ಮಂಗಗಳು ಹಣ್ಣೆ ತಿಂದು ಜೀವಿಪವು;
ಸಂಶಯ ಬಂತು ಆಕೆಗೆ! ನೀವೇ ನೆಂಬಿರಿ ಉತ್ತಮರೆ?
ಮಾನವರು ನಾವು! ವಾನರರು ಅವು! ಯಾರು ಹೇಳಿ ನಗೆಗೀಡು?
ಕೂದಲು ಉದುರೆ, ಹಲ್ಲು ಕಳಚೆ, ಗುಳ್ಳೆಗಣ್ಣು ಗಜ್ಜುಗವಾಗೆ!
ಚರ್ಮವೊಂದೇ ವ್ಯತ್ಯಾಸ! ವಸ್ತ್ರವೊಂದೇ ವ್ಯತ್ಯಾಸ!
ಎಂಥ ವಿಕಾರ ಅಡಗಿದೆ ಇಲ್ಲಿ ಮಾನವ ದೇಹದಲ್ಲಿ……..!
ಪರಿಯಿಷ್ಟೆ ಇನ್ನೂ ಸೂಕ್ಷ್ಮ ತೋರಿಸಬಲ್ಲೆ -ತೋರಿಸಿ ನಿಮ್ಮ ನೋಯಿಸಲೊಲ್ಲೆ!
ಆದರೆ, ನೋಡಿ, ಒಮ್ಮಾತಿನಲ್ಲಿ ಇದ್ದರೆ ಬೋನಿನ ಒಳಗಡೆ ನಾವು
ಕಾಣುವವೆಷ್ಟೋ ಅವಕಿಂತ ಅ-ವ-ಲ-ಕ್ಷ-ಣ!…………….
ತುಸುವೂ ಇಲ್ಲ ವ್ಯಾಯಾಮ! ಯೌವ್ವನ ಕಳೆಯಲು ಪರಿತಾಪ!
ನುಂಗುವುದಂತೂ ಲಾಡು, ಚಿರೋಟಿ ತಿಂದರೆ ಅರಗದು ನಮಗೇ ಗೊತ್ತು!
ಗುಡ್ಡದ ಗಾತ್ರ, ತಂಬಾಕು ಸೇದಲು ಸಾಲದು ನಿತ್ಯ ನಿತ್ಯ!
ಸಾಗರದಷ್ಟು ಸಾರಾಯಿ ಕುಡಿಯದೆ ತೃಪ್ತಿ ನಮಗೆಲ್ಲಿ?
ಯಾಕೋ ಏನೋ ಯಾರಿಗೆ ಗೊತ್ತು ಮಾನವರೆಲ್ಲರ ಪರಿಯಷ್ಟೆ!
ಕಾಯಗಳನ್ನು ಕಸುವಾಗಿಡಲು ಹಣ್ಣೇತಿಂದು ಇರಬಹುದಲ್ಲ?
ಆದರೆ ನೋಡಿ ಹಣ್ಣೆಲ್ಲ ವಾನರರಾಹಾರ!

ಹಣ್ಣು ಎಂದರೆ ಸಾಮಾನ್ಯ ಅಲ್ಲವು ಕೇಳಿ ನಿವೆಲ್ಲ!
ಬೇಸಿಗೆ ಬಿಸಿಲು, ಮಾಗೀ ಗಾಳೀ, ಭೂಮೀ ಸಾರ, ಜಡಿಮಳೆಯು
ಎಲ್ಲ ಸೇರಿ ಹಣ್ಣಿನ ರೂಪ ತಿಳಿಯದೆ? ನಿಮಗೆ? ಈ ಗುಟ್ಟು?
ದೇಹವ ಶೋಧಿಸಿ, ಮಿದುಳನು ತೊಳೆದು,
ದ್ವೇಷದ ದೋಷದ, ಇಲ್ಲಣ ತೊಡೆದು
ಮಾನವ ದೇಹವ ದೇವರ ಭಾವಕೆ ಸರಿಸಮನೆನಿಸಲು ಹಣ್ಣೇ ಬೇಕು!
ಆದರೆ, ನಾವು ದೇವರ ನೋಡಿಸಿ ಹಾ-ಯಾ-ಗಿ-ಹೆ-ವು!…………….
ಅದಕೇ ತಾನೇ, ಅವು ತಾವಾಗಿ ಕಾಣುತ ನಮ್ಮನುಹರಿದೂ ಹಾರೀ,
ಹತ್ತೀ, ಕುಣಿದೂ!…………..
ಬೆಳಗೂ ಬೈಗೂ, ತಲೆಕೆಳಗಾಗಿ ನೇತುಬಿದ್ದಿವೆ ಬೋನಲ್ಲಿ!
ಮಾಡುತಿಹನೆ ಅಪಹಾಸ್ಯ? ಮಾಡುತಿಹವೆ ನೀತಿಬೋಧೆ?
ನಗರದ ನರರ ಪರಿಮಿಷ್ಟೆ! ಬೋನಿನ ವಾನರರರಿವಷ್ಟೆ
ಅದು ನೋಡಿದರೆ ದೈವತ್ವ! ಅದರ ವಿಕಾರವೆ ನಮಗೆ ಮಹತ್ವ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...