Home / ಕವನ / ಕವಿತೆ / ನರ-ವಾನರ

ನರ-ವಾನರ

ಕಾಡಿನ ಕೋತಿ ಬಿದುರಿನ ಚದುರೆ ಖಾಸ ಬಂಗ್ಲಿ ಬೋನಲ್ಲಿ……….
ವಿಕಾರ! ವಿಕಟ! ನಗೆಗೇಡೆಂದು ಹಳಿವರು ನಾವು ಮಾನವರು!
ಗಡವಮಂಗ, ಬಾಲದಕೋತಿ, ಮೊಂಡು ಬಾಲ, ನೀಲಮೂಗು,
ಈ ಪರಿಯುಂಟು ಮಂಗಗಳು ಹಣ್ಣೆ ತಿಂದು ಜೀವಿಪವು;
ಸಂಶಯ ಬಂತು ಆಕೆಗೆ! ನೀವೇ ನೆಂಬಿರಿ ಉತ್ತಮರೆ?
ಮಾನವರು ನಾವು! ವಾನರರು ಅವು! ಯಾರು ಹೇಳಿ ನಗೆಗೀಡು?
ಕೂದಲು ಉದುರೆ, ಹಲ್ಲು ಕಳಚೆ, ಗುಳ್ಳೆಗಣ್ಣು ಗಜ್ಜುಗವಾಗೆ!
ಚರ್ಮವೊಂದೇ ವ್ಯತ್ಯಾಸ! ವಸ್ತ್ರವೊಂದೇ ವ್ಯತ್ಯಾಸ!
ಎಂಥ ವಿಕಾರ ಅಡಗಿದೆ ಇಲ್ಲಿ ಮಾನವ ದೇಹದಲ್ಲಿ……..!
ಪರಿಯಿಷ್ಟೆ ಇನ್ನೂ ಸೂಕ್ಷ್ಮ ತೋರಿಸಬಲ್ಲೆ -ತೋರಿಸಿ ನಿಮ್ಮ ನೋಯಿಸಲೊಲ್ಲೆ!
ಆದರೆ, ನೋಡಿ, ಒಮ್ಮಾತಿನಲ್ಲಿ ಇದ್ದರೆ ಬೋನಿನ ಒಳಗಡೆ ನಾವು
ಕಾಣುವವೆಷ್ಟೋ ಅವಕಿಂತ ಅ-ವ-ಲ-ಕ್ಷ-ಣ!…………….
ತುಸುವೂ ಇಲ್ಲ ವ್ಯಾಯಾಮ! ಯೌವ್ವನ ಕಳೆಯಲು ಪರಿತಾಪ!
ನುಂಗುವುದಂತೂ ಲಾಡು, ಚಿರೋಟಿ ತಿಂದರೆ ಅರಗದು ನಮಗೇ ಗೊತ್ತು!
ಗುಡ್ಡದ ಗಾತ್ರ, ತಂಬಾಕು ಸೇದಲು ಸಾಲದು ನಿತ್ಯ ನಿತ್ಯ!
ಸಾಗರದಷ್ಟು ಸಾರಾಯಿ ಕುಡಿಯದೆ ತೃಪ್ತಿ ನಮಗೆಲ್ಲಿ?
ಯಾಕೋ ಏನೋ ಯಾರಿಗೆ ಗೊತ್ತು ಮಾನವರೆಲ್ಲರ ಪರಿಯಷ್ಟೆ!
ಕಾಯಗಳನ್ನು ಕಸುವಾಗಿಡಲು ಹಣ್ಣೇತಿಂದು ಇರಬಹುದಲ್ಲ?
ಆದರೆ ನೋಡಿ ಹಣ್ಣೆಲ್ಲ ವಾನರರಾಹಾರ!

ಹಣ್ಣು ಎಂದರೆ ಸಾಮಾನ್ಯ ಅಲ್ಲವು ಕೇಳಿ ನಿವೆಲ್ಲ!
ಬೇಸಿಗೆ ಬಿಸಿಲು, ಮಾಗೀ ಗಾಳೀ, ಭೂಮೀ ಸಾರ, ಜಡಿಮಳೆಯು
ಎಲ್ಲ ಸೇರಿ ಹಣ್ಣಿನ ರೂಪ ತಿಳಿಯದೆ? ನಿಮಗೆ? ಈ ಗುಟ್ಟು?
ದೇಹವ ಶೋಧಿಸಿ, ಮಿದುಳನು ತೊಳೆದು,
ದ್ವೇಷದ ದೋಷದ, ಇಲ್ಲಣ ತೊಡೆದು
ಮಾನವ ದೇಹವ ದೇವರ ಭಾವಕೆ ಸರಿಸಮನೆನಿಸಲು ಹಣ್ಣೇ ಬೇಕು!
ಆದರೆ, ನಾವು ದೇವರ ನೋಡಿಸಿ ಹಾ-ಯಾ-ಗಿ-ಹೆ-ವು!…………….
ಅದಕೇ ತಾನೇ, ಅವು ತಾವಾಗಿ ಕಾಣುತ ನಮ್ಮನುಹರಿದೂ ಹಾರೀ,
ಹತ್ತೀ, ಕುಣಿದೂ!…………..
ಬೆಳಗೂ ಬೈಗೂ, ತಲೆಕೆಳಗಾಗಿ ನೇತುಬಿದ್ದಿವೆ ಬೋನಲ್ಲಿ!
ಮಾಡುತಿಹನೆ ಅಪಹಾಸ್ಯ? ಮಾಡುತಿಹವೆ ನೀತಿಬೋಧೆ?
ನಗರದ ನರರ ಪರಿಮಿಷ್ಟೆ! ಬೋನಿನ ವಾನರರರಿವಷ್ಟೆ
ಅದು ನೋಡಿದರೆ ದೈವತ್ವ! ಅದರ ವಿಕಾರವೆ ನಮಗೆ ಮಹತ್ವ!
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...