Home / ಕವನ / ಕವಿತೆ / ಕನಸು

ಕನಸು

ಪಿಡಿಗೆ ಅಡವೆನ್ನುವೊಲು! ನಿಡುಗತ್ತಲಡಗಿರಲು
ಸುಡುವ ಮನದವಮಾನದಲ್ಲಿ ಬೆಂದು ಬೆಂದು!
ಕಡುದುಗುಡ ಭಾರವನು ಹೂರುತಿರುವಳಾರೊ…………
ಅಮಮ! ಮಲಗಿರಲೆಲ್ಲ ಮೈಮರೆದು ಮರೆದು!-

ದೂರದಾತಾರೆಗಳು ತೀರದಾದುಗುಡಕ್ಕೆ
ತುಂಬಿ ಕಂಗಳ ನಿಂದು ನಿಡುಸುಯ್ದು ನೋಡಿ-
ಅಂಬ! ನೀನಾರೌವ್ವ ದುಗುಡವೇನೆನಲು
-ಅಮಮ! ಮಲಗಿರಲೆಲ್ಲ ಮೈಮರೆದು ಮರೆದು

ಯಾರದಾರಲಲ್ಲಲ್ಲಿ! ದಾರಿಯಲಿ ನಿಲ್ಲುತಲೆ
ಕುಂಟುತ್ತಲೆಡವುತ್ತ ನಡೆಯುತ್ತಲಿಹಳು
ಎಂಟು ರಾಜ್ಯದ ಮಾತೆ ಗಂಭೀರೆ ಯಾರೊ!
-ಅಮಮ! ಮಲಗಿಹರೆಲ್ಲ ತನುಮನವ ಮರೆದು-

ಸೆರೆ ಹಿಡಿದ! ಸರಪಳಿಯ ಸರಸರಕಜಣಜಣಕೆ
ನೆರೆ ಹಳಿವ ನಿಡುನಿಟ್ಠುರದ ನುಡಿಗೆ ನಡುಗಿ!
ಸೆಳೆದೊಯ್ಯುವಳು ಅಡಿಗಳನು! ಎಡವಿದರು ಎದ್ದು
-ಅಮಮ! ಮಲಗಿಹರಿವರು ಮೈಮರೆದು ಮರೆದು-

ಈ ಜಗದ ತಾಯಿಗೀಸೋಜಿಗದ ಭಂಧನವೆ?
ಪೂಜೆಗೊಂಬುವ ಪದ ಬಂಧನದಲಿರಲು
ಪೂಜೆಮಾಳ್ಪನೆ! ನಾನು! ಸಂಕೋಲೆಯ ಸೆರೆಯ!
-ಅಮಮ! ಮಲಗಿಹರೆಲ್ಲ ತನುಮನವ ಮರೆದು-

ಹೆಜ್ಜೆಯೊಂದಿಗೆ ಧನಿಯು! ಗೆಜ್ಜೆ ಪಾಡಗವಲ್ಲ.
ಸದ್ದ ಕೇಳಿದೆ ನಾನು! ಸರಪಳಿಯ ಸದ್ದ.
ನಿದ್ದೆ ತಿಳಿದದ್ದು ನಾನೆದ್ದು ಕುಳಿತಿರಲು………..
– ಅಮಮ! ಮಲಗಿಹರಿವರು ಮೈಮರೆದು ಮರೆದು-

ಜನದ ಗಜಬಿಜಿಯಲ್ಲಿ! ತನುಮನದ ಕೂಗಿನಲ್ಲಿ!
ಕನಸಿನಾಸಿರಿಪಾದ ಸರಪಣಿಯ ಸೆಳೆವ…….
ಜಣ ಝಣವು ಕೇಳುತಿದೆ ಈ ಹೃದಯದಲ್ಲಿ!
-ಅಮಮ! ಮಲಗಿಹರಿವರು ತನುಮನವ ಮರೆದು-
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...