Home / ಕವನ / ಕವಿತೆ / ಯಾತ್ರೆ

ಯಾತ್ರೆ

ಕಾವಡಿ ತಕ್ಕೊಂಡು ಕಾಶಿಯನು ಸಾರಿರಲು
ಗಂಗೆಯಲಿ ಕೆಸರಿತ್ತು ಹಾದಿಯಲಿ ಧೂಳಿತ್ತು
ವಿಶ್ವನಾಥನಿಗೆ ಮೈಲಿಗೆಯಾಗಿ ಅವನಾಗಿದ್ದ ಕಲ್ಲು!

ಪಾಪಿಗಳ ಬೀಡಾರವಾಗಿತ್ತು ವಾರಣಾಸಿ
ಸಾರನಾಥವು ಆಗಿತ್ತು ಅಸ್ತಿರಾಶಿ!
ದ್ವಾರಕದಿ ನೋಡಿದೆನು ಗೋಪಾಲ ನಿರಲಿಲ್ಲ!
ಕೇದಾರದಲ್ಲಿದ್ದೆ ಘನಹಿಮವದಾಗಿತ್ತು ಪ್ರಕೃತಿ ಜೀವ
ದೇವನಿರಲಿಲ್ಲ ಅಲ್ಲಿ! ಶಿವನಲ್ಲಿ ಕಾಣದಾದ!
ಆಬೆಟ್ಟ, ಈತೀರ್ಥ, ಈಸರಸು, ಆಉದಧಿ
ಎಲ್ಲೆಲ್ಲಿ ಹುಡುಕಿದರು ಸಿಗಲಿಲ್ಲದಾಹಶಾಂತಿ!
ದೊಡ್ಡವರ ಹುಡಿಕಿದನು! ಹೆಡ್ಡ! ಕೊಡುನಿನ್ನ ಬಿಸಿರಕ್ತ ಎಂದರವರು……
ಅರಿಯದಲೆ ದಾರಿಯನು ನಿಂತೆ ನೀರವದಲ್ಲಿ
“ಜಗದೊಳಗೆ ಕೀಳ ನೋರ್ವನ ಹುಡುಕು
ಅವನೊಳಗೆ ಹರಿಯುವುದು ಜೀವನದಿ”
ಎಂತೆಂಬ ಒಳಧನಿಯ ಕೇಳುತಲೆ……….. ಹುಡುಕಿದೆನು!
ಎತ್ತಲೂ, ಯಾರೂ, ಇರಲಿಲ್ಲ, ನನಗಿಂತ ಕೀಳು!
ನನ್ನೊಳಗೆ ನಾನೆಂದೆ-“ಹುಡುಕು ನಿನ್ನೊಳಗೆ”-ನಿಂತೆ……
ನಿಂತ ನಿಲುವಿಗೆ ಸಂತು ಸಂತಸದ ವರತೆ! ಕರಗಿ ನೀರಾದೆ
ಹರಿದು ತೊರೆಯಾದೆ! ಮುಕ್ತಿಸಾಗರದಿ ರಾಸಲೀಲೆ!
ಆದಕಾಗಿ ನನಗಿಹುದು ಆಹ್ವಾನ!……………
ಪಡೆಯುವೆನು ಪರಸಾದ! ಹಡೆಯುವೆನು ಸುಖಶಾಂತಿ
ಮುಡುಪಾಯ್ತು ಎನ್ನ ಜೀವ! ಕೇಳೆನ್ನ ಜೀವ!
*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...