Home / ಕವನ / ಕವಿತೆ / ಕಾಂಟೆಸಾದಲ್ಲಿ ಕಾವ್ಯ

ಕಾಂಟೆಸಾದಲ್ಲಿ ಕಾವ್ಯ

ಕಾಂಟೆಸಾದಲ್ಲಿ ಕೂತಾಗ ಕಾವ್ಯವಾಗದಿದ್ದರೆ
ಕುಂಟುನೆಪದ ಭವ್ಯತೆಯಲ್ಲಿ ಬತ್ತಿ ಹೋಗುತ್ತೇನೆ.
ಉರಳುವ ಚಕ್ರದಲ್ಲಿ ನರಳುವ ಕರುಳು-
ಕಾರಿರುಳ ಕಾರಲ್ಲಿ ಕಾಲಿಡುತ್ತಾನೆ ಕೌರವ;
ವಂದಿ ಮಾಗಧರು ನಂದಿ ಹೋದ ಹಾದಿಯಲ್ಲಿ
ಬರಿತಲೆಯ ಬರಿಗಾಲ ನಿಜ ಮಾನವ!

ಮತ್ತೊಬ್ಬ ಹತ್ತುತ್ತಿದ್ದಾನೆ ವೃಷಭಾಚಲಕ್ಕೆ
ಜಗತ್ತನ್ನು ಗೆದ್ದ ದೊಡ್ಡಸ್ತಿಕೆಯ ಶಿಖರಕ್ಕೆ
ಗೆದ್ದವರು ಎಷ್ಟೋ ಜನ! ಎಲ್ಲಿ ಬರೆಸಲಿ ಶಾಸನ?
ನಿರಸನಗೊಂಡದ್ದೇ ನಿಜವಾದ ಕವನ.

ಮೃತ್ಯುವೇ ಮೈವೆತ್ತ ಮುತ್ತುರತ್ನದ ಕಿರೀಟ
ಇಲ್ಲಿ ಆಸ್ಥಾನದಲ್ಲಿ ನೀಲಾಂಜನೆಯ ನೃತ್ಯ!
ಬಿಟ್ಟ ಕಣ್ಣುಗಳಲ್ಲಿ ಭ್ರಮೆಯ ಬೆಟ್ಟಗಳು
ಕುಸಿದು ಕುಪ್ಪೆಯಾಗುವುದರಲ್ಲಿ ಎಂಥ ಸತ್ಯ!

ಒಳಗೆ ತತ್ತಿಯೊಡೆದು ಹುಟ್ಟಿದೆ ಕತ್ತಿಕಾಳಗ
ತುಂಬಿ ಬರುತ್ತಿದೆ ನೆನಪಿನ ಕೊಳಗ;
ಬದುವಿನ ಮೇಲೆ ಚಿಟ್ಟೆ ಹಿಡಿಯುವಾಗ
ಹಾವು ಹೆಡೆ ಬಿಚ್ಚಿದ್ದು;
ಬುಸುಗುಡುವ ಬೆವರಲ್ಲಿ ಬಿಸಿಲ ಕುಡಿದು
ಕಣ್ಣುಗಳಲ್ಲಿ ಬಣ್ಣದ ಚಿತ್ತಾರ ಬಿಡಿಸಿದ್ದು;
ಬಸ್ಸಿಗೆ ಕಾಸಿಲ್ಲದೆ ಕಾಲಲ್ಲಿ ಕಾವ್ಯ ಬರೆದದ್ದು;
ಹಸಿದ ಹೊಟ್ಟೆಯ ಒಳಗೆ ಕನಸುಗಳು ಕಚ್ಚಿದ್ದು-
ಕತ್ತಲೆಯ ಕಟ್ಟುಗಳನ್ನು ಬಿಚ್ಚಿಕೊಳ್ಳುತ್ತದೆ
ಬುದ್ಧ ಬೆಳಕಿನ ಬುತ್ತಿ:

ಕಾವ್ಯ ತುಂಬಿಕೊಳ್ಳಬೇಕು ಕಾಂಟೆಸಾದ ಒಳಗೆ
ನೆನಪಾಗುತ್ತಲೇ ಇರಬೇಕು ಬರಿಗಾಲ ನಡಿಗೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...