Home / ಕವನ / ಕವಿತೆ / ಕಾಂಟೆಸಾದಲ್ಲಿ ಕಾವ್ಯ

ಕಾಂಟೆಸಾದಲ್ಲಿ ಕಾವ್ಯ

ಕಾಂಟೆಸಾದಲ್ಲಿ ಕೂತಾಗ ಕಾವ್ಯವಾಗದಿದ್ದರೆ
ಕುಂಟುನೆಪದ ಭವ್ಯತೆಯಲ್ಲಿ ಬತ್ತಿ ಹೋಗುತ್ತೇನೆ.
ಉರಳುವ ಚಕ್ರದಲ್ಲಿ ನರಳುವ ಕರುಳು-
ಕಾರಿರುಳ ಕಾರಲ್ಲಿ ಕಾಲಿಡುತ್ತಾನೆ ಕೌರವ;
ವಂದಿ ಮಾಗಧರು ನಂದಿ ಹೋದ ಹಾದಿಯಲ್ಲಿ
ಬರಿತಲೆಯ ಬರಿಗಾಲ ನಿಜ ಮಾನವ!

ಮತ್ತೊಬ್ಬ ಹತ್ತುತ್ತಿದ್ದಾನೆ ವೃಷಭಾಚಲಕ್ಕೆ
ಜಗತ್ತನ್ನು ಗೆದ್ದ ದೊಡ್ಡಸ್ತಿಕೆಯ ಶಿಖರಕ್ಕೆ
ಗೆದ್ದವರು ಎಷ್ಟೋ ಜನ! ಎಲ್ಲಿ ಬರೆಸಲಿ ಶಾಸನ?
ನಿರಸನಗೊಂಡದ್ದೇ ನಿಜವಾದ ಕವನ.

ಮೃತ್ಯುವೇ ಮೈವೆತ್ತ ಮುತ್ತುರತ್ನದ ಕಿರೀಟ
ಇಲ್ಲಿ ಆಸ್ಥಾನದಲ್ಲಿ ನೀಲಾಂಜನೆಯ ನೃತ್ಯ!
ಬಿಟ್ಟ ಕಣ್ಣುಗಳಲ್ಲಿ ಭ್ರಮೆಯ ಬೆಟ್ಟಗಳು
ಕುಸಿದು ಕುಪ್ಪೆಯಾಗುವುದರಲ್ಲಿ ಎಂಥ ಸತ್ಯ!

ಒಳಗೆ ತತ್ತಿಯೊಡೆದು ಹುಟ್ಟಿದೆ ಕತ್ತಿಕಾಳಗ
ತುಂಬಿ ಬರುತ್ತಿದೆ ನೆನಪಿನ ಕೊಳಗ;
ಬದುವಿನ ಮೇಲೆ ಚಿಟ್ಟೆ ಹಿಡಿಯುವಾಗ
ಹಾವು ಹೆಡೆ ಬಿಚ್ಚಿದ್ದು;
ಬುಸುಗುಡುವ ಬೆವರಲ್ಲಿ ಬಿಸಿಲ ಕುಡಿದು
ಕಣ್ಣುಗಳಲ್ಲಿ ಬಣ್ಣದ ಚಿತ್ತಾರ ಬಿಡಿಸಿದ್ದು;
ಬಸ್ಸಿಗೆ ಕಾಸಿಲ್ಲದೆ ಕಾಲಲ್ಲಿ ಕಾವ್ಯ ಬರೆದದ್ದು;
ಹಸಿದ ಹೊಟ್ಟೆಯ ಒಳಗೆ ಕನಸುಗಳು ಕಚ್ಚಿದ್ದು-
ಕತ್ತಲೆಯ ಕಟ್ಟುಗಳನ್ನು ಬಿಚ್ಚಿಕೊಳ್ಳುತ್ತದೆ
ಬುದ್ಧ ಬೆಳಕಿನ ಬುತ್ತಿ:

ಕಾವ್ಯ ತುಂಬಿಕೊಳ್ಳಬೇಕು ಕಾಂಟೆಸಾದ ಒಳಗೆ
ನೆನಪಾಗುತ್ತಲೇ ಇರಬೇಕು ಬರಿಗಾಲ ನಡಿಗೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...