Home / ಕವನ / ಕವಿತೆ / ಕಾಂಟೆಸಾದಲ್ಲಿ ಕಾವ್ಯ

ಕಾಂಟೆಸಾದಲ್ಲಿ ಕಾವ್ಯ

ಕಾಂಟೆಸಾದಲ್ಲಿ ಕೂತಾಗ ಕಾವ್ಯವಾಗದಿದ್ದರೆ
ಕುಂಟುನೆಪದ ಭವ್ಯತೆಯಲ್ಲಿ ಬತ್ತಿ ಹೋಗುತ್ತೇನೆ.
ಉರಳುವ ಚಕ್ರದಲ್ಲಿ ನರಳುವ ಕರುಳು-
ಕಾರಿರುಳ ಕಾರಲ್ಲಿ ಕಾಲಿಡುತ್ತಾನೆ ಕೌರವ;
ವಂದಿ ಮಾಗಧರು ನಂದಿ ಹೋದ ಹಾದಿಯಲ್ಲಿ
ಬರಿತಲೆಯ ಬರಿಗಾಲ ನಿಜ ಮಾನವ!

ಮತ್ತೊಬ್ಬ ಹತ್ತುತ್ತಿದ್ದಾನೆ ವೃಷಭಾಚಲಕ್ಕೆ
ಜಗತ್ತನ್ನು ಗೆದ್ದ ದೊಡ್ಡಸ್ತಿಕೆಯ ಶಿಖರಕ್ಕೆ
ಗೆದ್ದವರು ಎಷ್ಟೋ ಜನ! ಎಲ್ಲಿ ಬರೆಸಲಿ ಶಾಸನ?
ನಿರಸನಗೊಂಡದ್ದೇ ನಿಜವಾದ ಕವನ.

ಮೃತ್ಯುವೇ ಮೈವೆತ್ತ ಮುತ್ತುರತ್ನದ ಕಿರೀಟ
ಇಲ್ಲಿ ಆಸ್ಥಾನದಲ್ಲಿ ನೀಲಾಂಜನೆಯ ನೃತ್ಯ!
ಬಿಟ್ಟ ಕಣ್ಣುಗಳಲ್ಲಿ ಭ್ರಮೆಯ ಬೆಟ್ಟಗಳು
ಕುಸಿದು ಕುಪ್ಪೆಯಾಗುವುದರಲ್ಲಿ ಎಂಥ ಸತ್ಯ!

ಒಳಗೆ ತತ್ತಿಯೊಡೆದು ಹುಟ್ಟಿದೆ ಕತ್ತಿಕಾಳಗ
ತುಂಬಿ ಬರುತ್ತಿದೆ ನೆನಪಿನ ಕೊಳಗ;
ಬದುವಿನ ಮೇಲೆ ಚಿಟ್ಟೆ ಹಿಡಿಯುವಾಗ
ಹಾವು ಹೆಡೆ ಬಿಚ್ಚಿದ್ದು;
ಬುಸುಗುಡುವ ಬೆವರಲ್ಲಿ ಬಿಸಿಲ ಕುಡಿದು
ಕಣ್ಣುಗಳಲ್ಲಿ ಬಣ್ಣದ ಚಿತ್ತಾರ ಬಿಡಿಸಿದ್ದು;
ಬಸ್ಸಿಗೆ ಕಾಸಿಲ್ಲದೆ ಕಾಲಲ್ಲಿ ಕಾವ್ಯ ಬರೆದದ್ದು;
ಹಸಿದ ಹೊಟ್ಟೆಯ ಒಳಗೆ ಕನಸುಗಳು ಕಚ್ಚಿದ್ದು-
ಕತ್ತಲೆಯ ಕಟ್ಟುಗಳನ್ನು ಬಿಚ್ಚಿಕೊಳ್ಳುತ್ತದೆ
ಬುದ್ಧ ಬೆಳಕಿನ ಬುತ್ತಿ:

ಕಾವ್ಯ ತುಂಬಿಕೊಳ್ಳಬೇಕು ಕಾಂಟೆಸಾದ ಒಳಗೆ
ನೆನಪಾಗುತ್ತಲೇ ಇರಬೇಕು ಬರಿಗಾಲ ನಡಿಗೆ.
*****

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...