ಕಾಂಟೆಸಾದಲ್ಲಿ ಕಾವ್ಯ

ಕಾಂಟೆಸಾದಲ್ಲಿ ಕೂತಾಗ ಕಾವ್ಯವಾಗದಿದ್ದರೆ
ಕುಂಟುನೆಪದ ಭವ್ಯತೆಯಲ್ಲಿ ಬತ್ತಿ ಹೋಗುತ್ತೇನೆ.
ಉರಳುವ ಚಕ್ರದಲ್ಲಿ ನರಳುವ ಕರುಳು-
ಕಾರಿರುಳ ಕಾರಲ್ಲಿ ಕಾಲಿಡುತ್ತಾನೆ ಕೌರವ;
ವಂದಿ ಮಾಗಧರು ನಂದಿ ಹೋದ ಹಾದಿಯಲ್ಲಿ
ಬರಿತಲೆಯ ಬರಿಗಾಲ ನಿಜ ಮಾನವ!

ಮತ್ತೊಬ್ಬ ಹತ್ತುತ್ತಿದ್ದಾನೆ ವೃಷಭಾಚಲಕ್ಕೆ
ಜಗತ್ತನ್ನು ಗೆದ್ದ ದೊಡ್ಡಸ್ತಿಕೆಯ ಶಿಖರಕ್ಕೆ
ಗೆದ್ದವರು ಎಷ್ಟೋ ಜನ! ಎಲ್ಲಿ ಬರೆಸಲಿ ಶಾಸನ?
ನಿರಸನಗೊಂಡದ್ದೇ ನಿಜವಾದ ಕವನ.

ಮೃತ್ಯುವೇ ಮೈವೆತ್ತ ಮುತ್ತುರತ್ನದ ಕಿರೀಟ
ಇಲ್ಲಿ ಆಸ್ಥಾನದಲ್ಲಿ ನೀಲಾಂಜನೆಯ ನೃತ್ಯ!
ಬಿಟ್ಟ ಕಣ್ಣುಗಳಲ್ಲಿ ಭ್ರಮೆಯ ಬೆಟ್ಟಗಳು
ಕುಸಿದು ಕುಪ್ಪೆಯಾಗುವುದರಲ್ಲಿ ಎಂಥ ಸತ್ಯ!

ಒಳಗೆ ತತ್ತಿಯೊಡೆದು ಹುಟ್ಟಿದೆ ಕತ್ತಿಕಾಳಗ
ತುಂಬಿ ಬರುತ್ತಿದೆ ನೆನಪಿನ ಕೊಳಗ;
ಬದುವಿನ ಮೇಲೆ ಚಿಟ್ಟೆ ಹಿಡಿಯುವಾಗ
ಹಾವು ಹೆಡೆ ಬಿಚ್ಚಿದ್ದು;
ಬುಸುಗುಡುವ ಬೆವರಲ್ಲಿ ಬಿಸಿಲ ಕುಡಿದು
ಕಣ್ಣುಗಳಲ್ಲಿ ಬಣ್ಣದ ಚಿತ್ತಾರ ಬಿಡಿಸಿದ್ದು;
ಬಸ್ಸಿಗೆ ಕಾಸಿಲ್ಲದೆ ಕಾಲಲ್ಲಿ ಕಾವ್ಯ ಬರೆದದ್ದು;
ಹಸಿದ ಹೊಟ್ಟೆಯ ಒಳಗೆ ಕನಸುಗಳು ಕಚ್ಚಿದ್ದು-
ಕತ್ತಲೆಯ ಕಟ್ಟುಗಳನ್ನು ಬಿಚ್ಚಿಕೊಳ್ಳುತ್ತದೆ
ಬುದ್ಧ ಬೆಳಕಿನ ಬುತ್ತಿ:

ಕಾವ್ಯ ತುಂಬಿಕೊಳ್ಳಬೇಕು ಕಾಂಟೆಸಾದ ಒಳಗೆ
ನೆನಪಾಗುತ್ತಲೇ ಇರಬೇಕು ಬರಿಗಾಲ ನಡಿಗೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏನಪರಾಧ ಮಾಡಿದೆನೆಂದು?
Next post ಒಳ್ಳೆಯ ಹೆಂಡತಿ ಕೊಡು

ಸಣ್ಣ ಕತೆ

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

cheap jordans|wholesale air max|wholesale jordans|wholesale jewelry|wholesale jerseys