Home / ಕವನ / ಕವಿತೆ / ಕಾಂಟೆಸಾದಲ್ಲಿ ಕಾವ್ಯ

ಕಾಂಟೆಸಾದಲ್ಲಿ ಕಾವ್ಯ

ಕಾಂಟೆಸಾದಲ್ಲಿ ಕೂತಾಗ ಕಾವ್ಯವಾಗದಿದ್ದರೆ
ಕುಂಟುನೆಪದ ಭವ್ಯತೆಯಲ್ಲಿ ಬತ್ತಿ ಹೋಗುತ್ತೇನೆ.
ಉರಳುವ ಚಕ್ರದಲ್ಲಿ ನರಳುವ ಕರುಳು-
ಕಾರಿರುಳ ಕಾರಲ್ಲಿ ಕಾಲಿಡುತ್ತಾನೆ ಕೌರವ;
ವಂದಿ ಮಾಗಧರು ನಂದಿ ಹೋದ ಹಾದಿಯಲ್ಲಿ
ಬರಿತಲೆಯ ಬರಿಗಾಲ ನಿಜ ಮಾನವ!

ಮತ್ತೊಬ್ಬ ಹತ್ತುತ್ತಿದ್ದಾನೆ ವೃಷಭಾಚಲಕ್ಕೆ
ಜಗತ್ತನ್ನು ಗೆದ್ದ ದೊಡ್ಡಸ್ತಿಕೆಯ ಶಿಖರಕ್ಕೆ
ಗೆದ್ದವರು ಎಷ್ಟೋ ಜನ! ಎಲ್ಲಿ ಬರೆಸಲಿ ಶಾಸನ?
ನಿರಸನಗೊಂಡದ್ದೇ ನಿಜವಾದ ಕವನ.

ಮೃತ್ಯುವೇ ಮೈವೆತ್ತ ಮುತ್ತುರತ್ನದ ಕಿರೀಟ
ಇಲ್ಲಿ ಆಸ್ಥಾನದಲ್ಲಿ ನೀಲಾಂಜನೆಯ ನೃತ್ಯ!
ಬಿಟ್ಟ ಕಣ್ಣುಗಳಲ್ಲಿ ಭ್ರಮೆಯ ಬೆಟ್ಟಗಳು
ಕುಸಿದು ಕುಪ್ಪೆಯಾಗುವುದರಲ್ಲಿ ಎಂಥ ಸತ್ಯ!

ಒಳಗೆ ತತ್ತಿಯೊಡೆದು ಹುಟ್ಟಿದೆ ಕತ್ತಿಕಾಳಗ
ತುಂಬಿ ಬರುತ್ತಿದೆ ನೆನಪಿನ ಕೊಳಗ;
ಬದುವಿನ ಮೇಲೆ ಚಿಟ್ಟೆ ಹಿಡಿಯುವಾಗ
ಹಾವು ಹೆಡೆ ಬಿಚ್ಚಿದ್ದು;
ಬುಸುಗುಡುವ ಬೆವರಲ್ಲಿ ಬಿಸಿಲ ಕುಡಿದು
ಕಣ್ಣುಗಳಲ್ಲಿ ಬಣ್ಣದ ಚಿತ್ತಾರ ಬಿಡಿಸಿದ್ದು;
ಬಸ್ಸಿಗೆ ಕಾಸಿಲ್ಲದೆ ಕಾಲಲ್ಲಿ ಕಾವ್ಯ ಬರೆದದ್ದು;
ಹಸಿದ ಹೊಟ್ಟೆಯ ಒಳಗೆ ಕನಸುಗಳು ಕಚ್ಚಿದ್ದು-
ಕತ್ತಲೆಯ ಕಟ್ಟುಗಳನ್ನು ಬಿಚ್ಚಿಕೊಳ್ಳುತ್ತದೆ
ಬುದ್ಧ ಬೆಳಕಿನ ಬುತ್ತಿ:

ಕಾವ್ಯ ತುಂಬಿಕೊಳ್ಳಬೇಕು ಕಾಂಟೆಸಾದ ಒಳಗೆ
ನೆನಪಾಗುತ್ತಲೇ ಇರಬೇಕು ಬರಿಗಾಲ ನಡಿಗೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...