ಎಲೆ ಸಾವೇ ನೀನೇಕೆ ಜೀವಂತ?

ಬಿದ್ದ ಮರಗಳ ಬುಡಕ್ಕೆ ಹತ್ತಿದ ಗೆದ್ದಲು
ನಿಗಿ ನಿಗಿ ಕೆಂಡಕ್ಕೆ ಕಣ್ಣೀರು ಬಿದ್ದು ಬರಿ ಇದ್ದಿಲು
ದಾರಿ ಬದಿಯಲ್ಲಿ ದುಗುಡ ತುಂಬಿದ ಗಿಡ
ಮೇಲೆ ನೋಡಿದರೆ ನಡುಗುತ್ತಿರುವ ಮೋಡ.

ಬಿದ್ದ ಮನೆಯ ಜಂತೆಗಳಲ್ಲಿ ಕಂತೆಕಂತೆ ಕತೆಗಳು
ಸಂತೆ ಗದ್ದಲದ ನಡುವೆ ಮೌನಕವಿತೆಗಳು
ರಕ್ಕೆ ಸುಟ್ಟ ಹಕ್ಕಿಯೊಳಗೆ ನಿಂತ ನಾದಗಳು
ಬೇರಲ್ಲೇ ಬೋರಲಾಗಿ ಬಿದ್ದ ಜೀವಬಳ್ಳಿಗಳು.

ಎಲ್ಲಿ ಹೋದರು ಅವರು ಎತ್ತಿ ಆಡಿಸಿದವರು?
ತೋಳ ತುಂಬ ಭಾವ ತುಂಬಿಕೊಂಡ ಜನರು!
ಬಂದೆಯಾ ಮಗುವೆ ಈ ನೆಲದ ನಗುವೆ
ಎನ್ನುತ್ತ ಮನದುಂಬಿ ಹಾಡಾಗಿ ಮಿಡಿದವರು
ಮನೆತನವ ಮೀರಿ ಗೆಳತನದ ಹಣತೆಯಲ್ಲಿ
ಉರಿದು ಕರಕಾದ ಹಟ್ಟಿಯ ಅಜ್ಜಂದಿರು
ಮುಟ್ಟಿ ಮಲ್ಲಿಗೆ ಮಾಡಿದವರು.

ಎಲೆ ಸಾವೇ ನೀನೇಕೆ ಜೀವಂತ?
ಎಲ್ಲರ ಜೀವ ಕಳೆಯುವ ಧಾವಂತ!
ಭೂಮಿಯೊಳಗಿಂದ ಎದ್ದುಬರುವೆ
ಆಕಾಶದಿಂದ ಬಿದ್ದು ಸುರಿವೆ
ಬೆಂಕಿಯಾಗಿ ಬಿರುಗಾಳಿಯಾಗಿ
ಹರಿವ ನೀರೊಳಗಿನ ಉರಿಯಾಗಿ
ಜೀವ ಕಳೆಯುತ್ತಲೇ ಜೀವಕಳೆಯಾಗುತ್ತಿರುವೆ.

ಹೊಕ್ಕುಳಲ್ಲಿ ಹುಟ್ಟಿದ ಸಾವೇ
ಬಳ್ಳಿಗೆ ಕೊಳ್ಳಿಯಿಡುವುದು ತರವೆ?
ಮಗುವಿನ ಮೊದಲ ಅಳು
ನಗುವಾಗುವ ಮೊದಲೇ
ಸಿಡಿಯಾಗಿ ಹಿಡಿಯುವ ಉಡವೇ,
ಬೆನ್ನು ಬಿಡದ ಬಾಳ ಗಡುವೇ,
ಮಾತುಗಳನ್ನು ಮೌನದಲ್ಲಿ ಒಸಗುತ್ತೀಯ
ನಗುವನ್ನು ನಡುವಲ್ಲೇ ಕತ್ತರಿಸುತ್ತೀಯ
ಹಾವಿನ ಸೇಡಿಗೆ ಹತ್ಯೆಯಾಗುತ್ತೀಯ
ನೋವಿನ ನೇಣಿಗೆ ಆತ್ಮಹತ್ಯೆಯಾಗುತ್ತೀಯ
ಪೊಲೀಸರ ಗುಂಡಾಗುತ್ತೀಯ
ಹೆಣ್ಣಿಗೆ ಗಂಡಾಗುತ್ತೀಯ
ಕುರ್ಚಿಯಲ್ಲಿ ಕೂತ ಭರ್ಜಿಯಾಗುತ್ತೀಯ
ಎಲ್ಲರೊಳಗಿದ್ದೂ ಎದುರುಬದರಾಗುತ್ತೀಯ
ನೀನಲ್ಲವೆ ನಿಜವಾದ ಆತ್ಮ!
ಸಾವಿಲ್ಲದ ಅಂತರಾತ್ಮ!

ಸಾವು ಶಿಖರವಾಗಿ ಪರ್ವತಾರೋಹಿಗಳೇ ಎಲ್ಲ
ಆಮ್ಲಜನಕ ಯಾರ ಬಳಿಯಲ್ಲೂ ಇಲ್ಲ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಷ್ಟು ಜನ್ಮದ ಪುಣ್ಯದ ಫಲವೋ
Next post ಕಣ್ಣೀರ ಹನಿ

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys