Home / ಕವನ / ಕವಿತೆ / ಎಲೆ ಸಾವೇ ನೀನೇಕೆ ಜೀವಂತ?

ಎಲೆ ಸಾವೇ ನೀನೇಕೆ ಜೀವಂತ?

ಬಿದ್ದ ಮರಗಳ ಬುಡಕ್ಕೆ ಹತ್ತಿದ ಗೆದ್ದಲು
ನಿಗಿ ನಿಗಿ ಕೆಂಡಕ್ಕೆ ಕಣ್ಣೀರು ಬಿದ್ದು ಬರಿ ಇದ್ದಿಲು
ದಾರಿ ಬದಿಯಲ್ಲಿ ದುಗುಡ ತುಂಬಿದ ಗಿಡ
ಮೇಲೆ ನೋಡಿದರೆ ನಡುಗುತ್ತಿರುವ ಮೋಡ.

ಬಿದ್ದ ಮನೆಯ ಜಂತೆಗಳಲ್ಲಿ ಕಂತೆಕಂತೆ ಕತೆಗಳು
ಸಂತೆ ಗದ್ದಲದ ನಡುವೆ ಮೌನಕವಿತೆಗಳು
ರಕ್ಕೆ ಸುಟ್ಟ ಹಕ್ಕಿಯೊಳಗೆ ನಿಂತ ನಾದಗಳು
ಬೇರಲ್ಲೇ ಬೋರಲಾಗಿ ಬಿದ್ದ ಜೀವಬಳ್ಳಿಗಳು.

ಎಲ್ಲಿ ಹೋದರು ಅವರು ಎತ್ತಿ ಆಡಿಸಿದವರು?
ತೋಳ ತುಂಬ ಭಾವ ತುಂಬಿಕೊಂಡ ಜನರು!
ಬಂದೆಯಾ ಮಗುವೆ ಈ ನೆಲದ ನಗುವೆ
ಎನ್ನುತ್ತ ಮನದುಂಬಿ ಹಾಡಾಗಿ ಮಿಡಿದವರು
ಮನೆತನವ ಮೀರಿ ಗೆಳತನದ ಹಣತೆಯಲ್ಲಿ
ಉರಿದು ಕರಕಾದ ಹಟ್ಟಿಯ ಅಜ್ಜಂದಿರು
ಮುಟ್ಟಿ ಮಲ್ಲಿಗೆ ಮಾಡಿದವರು.

ಎಲೆ ಸಾವೇ ನೀನೇಕೆ ಜೀವಂತ?
ಎಲ್ಲರ ಜೀವ ಕಳೆಯುವ ಧಾವಂತ!
ಭೂಮಿಯೊಳಗಿಂದ ಎದ್ದುಬರುವೆ
ಆಕಾಶದಿಂದ ಬಿದ್ದು ಸುರಿವೆ
ಬೆಂಕಿಯಾಗಿ ಬಿರುಗಾಳಿಯಾಗಿ
ಹರಿವ ನೀರೊಳಗಿನ ಉರಿಯಾಗಿ
ಜೀವ ಕಳೆಯುತ್ತಲೇ ಜೀವಕಳೆಯಾಗುತ್ತಿರುವೆ.

ಹೊಕ್ಕುಳಲ್ಲಿ ಹುಟ್ಟಿದ ಸಾವೇ
ಬಳ್ಳಿಗೆ ಕೊಳ್ಳಿಯಿಡುವುದು ತರವೆ?
ಮಗುವಿನ ಮೊದಲ ಅಳು
ನಗುವಾಗುವ ಮೊದಲೇ
ಸಿಡಿಯಾಗಿ ಹಿಡಿಯುವ ಉಡವೇ,
ಬೆನ್ನು ಬಿಡದ ಬಾಳ ಗಡುವೇ,
ಮಾತುಗಳನ್ನು ಮೌನದಲ್ಲಿ ಒಸಗುತ್ತೀಯ
ನಗುವನ್ನು ನಡುವಲ್ಲೇ ಕತ್ತರಿಸುತ್ತೀಯ
ಹಾವಿನ ಸೇಡಿಗೆ ಹತ್ಯೆಯಾಗುತ್ತೀಯ
ನೋವಿನ ನೇಣಿಗೆ ಆತ್ಮಹತ್ಯೆಯಾಗುತ್ತೀಯ
ಪೊಲೀಸರ ಗುಂಡಾಗುತ್ತೀಯ
ಹೆಣ್ಣಿಗೆ ಗಂಡಾಗುತ್ತೀಯ
ಕುರ್ಚಿಯಲ್ಲಿ ಕೂತ ಭರ್ಜಿಯಾಗುತ್ತೀಯ
ಎಲ್ಲರೊಳಗಿದ್ದೂ ಎದುರುಬದರಾಗುತ್ತೀಯ
ನೀನಲ್ಲವೆ ನಿಜವಾದ ಆತ್ಮ!
ಸಾವಿಲ್ಲದ ಅಂತರಾತ್ಮ!

ಸಾವು ಶಿಖರವಾಗಿ ಪರ್ವತಾರೋಹಿಗಳೇ ಎಲ್ಲ
ಆಮ್ಲಜನಕ ಯಾರ ಬಳಿಯಲ್ಲೂ ಇಲ್ಲ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...