Home / ಕವನ / ಕವಿತೆ / ಕರ್ಣ

ಕರ್ಣ

ಸಿಕ್ಕೀತು ಹೇಗೆ ಕರ್ಣನಿಗೆ
ಈ ನಾಡ ಸಿಂಹಾಸನ!
ಹೆತ್ತ ತಾಯಿಯೆ ತೇಲಿಬಿಟ್ಟಳು-
ನೀರ ಮೇಲಿನ ಪಯಣ.

ಮೀನುಗಳು ಮುತ್ತಿಟ್ಟವು
ಮೊಸಳೆಗಳು ಮುಟ್ಟವು
ಅಲೆಯ ಮೇಲಿನ ಬಾಳು
ಆಸೆಗಳು ಹುಟ್ಟವು.

ಒಬ್ಬನಿಗೆ ಹೃದಯಕಳಶ
ಇನ್ನೊಬ್ಬನಿಗೆ ಮೈಯ ಕವಚ
ಕರ್ಣಕುಂಡಲಕ್ಕೂ ಬಿತ್ತು ದಾನದ ಕತ್ತಿ
ಮಾರಿಕೊಳ್ಳದ ಮನಸು
ಕನ್ನಡದ ಕರ್ಣಕನಸು
ಬತ್ತಿಹೋಗದ ಒರತ ಜೀವಶಕ್ತಿ.

ಕಣ್ಣಪಟ್ಟಿಯ ಕುರುಕ್ಷೇತ್ರದಲ್ಲಿ
ಕರ್ಣ ರಥವ ಹತ್ತಿದ;
ವರ್ಣ ಪಥವ ಮೀರಿ ಮಿಂಚಿ
ಕೃಷ್ಣಗೀತೆ ಕೇಳಿ ಸಟೆದ
ಪಾರ್ಥನಿಗೆ ದಕ್ಕಿದ.

ಭಾರತದ ಭೂಪಟದಲ್ಲಿ ನಮ್ಮ ನಾಡ ಕರ್ಣ
ಯಾರು ಕೃಷ್ಣ ಯಾರು ಪಾರ್ಥ
ಕರ್ಣರಥಕೆ ಕೆಂಪು ಕೆಸರು
ಎದ್ದು ನಿಂತ ಸ್ವಾರ್ಥ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...